ಉದಯವಾಹಿನಿ, ಬೆಂಗಳೂರು: ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ “ವಿರಾಟ್ ವಿಶ್ವಕರ್ಮ ಮಹೋತ್ಸವ” ಅಂಗವಾಗಿ ಭಗವಾನ್ ವಿಶ್ವಕರ್ಮರ ಕುರಿತಾದ ಭಕ್ತಿ ಗೀತ ಗಾಯನ ಮತ್ತು ನೃತ್ಯ ಸ್ಪರ್ಧೆಯನ್ನು ಸೆಪ್ಟೆಂಬರ್ ೨೭ ರಂದು ಆಯೋಜಿಸಲಾಗಿದೆ ಎಂದು ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಕಲಾಪೋಷಕ ವಿಶ್ವಕರ್ಮ ನಾಡೋಜ ಡಾ. ಉಮೇಶ್ ಕುಮಾರ್ ತಿಳಿಸಿದ್ದಾರೆ.ಅವರು ಸ್ಪರ್ಧೆಯ ಜಾಗೃತಿ ಪತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಖ್ಯಾತ ನೃತ್ಯ ತೀರ್ಪುಗಾರರಾದ  ಷಡಕ್ಷರಿ, ಭಾವನಾ ವೆಂಕಟೇಶ್ವರ, ಚೈತ್ರ ಅನಂತ್, ಅನುರಾಧ ಲೋಕೇಶ್ ಖ್ಯಾತ ಸಂಗೀತ ತೀರ್ಪುಗಾರರಾದ ರೋಹಿಣಿ ರಘುನಂದನ್, ಮಹೇಶ್ ಮಹದೇವ್, ಪ್ರಿಯದರ್ಶಿನಿ, ಶ್ಲಾಘ್ಯ ವಶಿಷ್ಠ ರವರುಗಳು ಮಾತನಾಡಿ ಭಗವಾನ್ ವಿಶ್ವಕರ್ಮರನ್ನು ಸ್ತುತಿಸುವ ಈ ಸ್ಪರ್ಧೆಗಳಿಗೆ ವಿಡಿಯೋ ಆಡಿಶನ್ ಮೂಲಕ ಸ್ಪರ್ಧಾಳುಗಳನ್ನು ಆಯ್ಕೆ ಮಾಡಲಿದ್ಧಾರೆ. ಅಂತಿಮ ಸ್ಪರ್ಧೆಗಳು ಸೆಪ್ಟೆಂಬರ್ ೨೭ ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಸಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!