ಉದಯವಾಹಿನಿ, ರಾಯಚೂರು : ಸ್ಟೇರಿಂಗ್ ಕಟ್ ಆಗಿ KSRTC ಬಸ್ ಒಂದು ಜಮೀನಿಗೆ ನುಗ್ಗಿದ ಘಟನೆ ಮಾನ್ವಿಯ ನಂದಿಹಾಳ ಬಳಿ ನಡೆದಿದೆ.
ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಮಾನ್ವಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಟೇರಿಂಗ್ ರಾಡ್ ಕಟ್ ಆದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೊದಲು ತಡೆಗೋಡೆಗೆ ಡಿಕ್ಕಿ ಹೊಡೆದು ನಂತರ ಗದ್ದೆಗೆ ಇಳಿದಿದೆ.ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!