ಉದಯವಾಹಿನಿ, ಬೆಂಗಳೂರು: ದಲಿತರಿಗೆ ಸಿಗಬೇಕಾದ ನಿವೇಶನಗಳನ್ನ ಡಿಸಿಎಂ ಡಿಕೆ ಶಿವಕುಮಾರ್ ಲಪಟಾಯಿಸಿದ್ದಾರೆ. ಅಸಲಿ ಸೊಸೈಟಿ ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಪಾದಯಾತ್ರ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ದಲಿತರಿಗೆ ಸೇರಬೇಕಾದ 68 ಎಕರೆ ಜಮೀನನ್ನು ಡಿಸಿಎಂ ಲಪಟಾಯಿಸಿದ್ದಾರೆ.
ಇವರ ಬಳಿ ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ. ನಾನು ಸಿನಿಮಾ ವಿತರಕ ಆಗಿದ್ದಾಗ ಭೂಮಿ ಖರೀದಿಸಿದ್ದೆ. ಯಾರಿಗೂ ಮೋಸ ಮಾಡಲಿಲ್ಲ. ವಂಚನೆ ಮಾಡಿ ಭೂಮಿ ಖರೀದಿಸಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಮದು ವಾಗ್ದಾಳಿ ನಡೆಸಿದ್ದಾರೆ.
ಹೆಣ್ಣು ಮಗಳೊಬ್ಬಳನ್ನ ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ಇವರು. ಆ ಹೆಣ್ಣುಮಗಳ ಕಿಡ್ನ್ಯಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ಸೈಟು ಬರೆಸಿಕೊಂಡಿದ್ದೀರಿ. ಅದೇನೋ ಬಿಚ್ತೀನಿ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು, ವಿಜಯೇಂದ್ರದು ಏನಿದೆ ನಿಮ್ಮ ಬಳಿ ಬಿಚ್ಚಿ? ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದ್ದಾರೆ.ನಾನು ಬಿಚ್ಚೋಕೆ ಹೋದರೆ ನಿಮ್ಮದು ಪುಟ ಗಟ್ಟಲೆ ಇದೆ. ಅದನ್ನ ತನಿಖೆ ಮಾಡೋದಕ್ಕೆ ಹತ್ತತ್ತು ಸಿಬಿಐ, ಇಡಿ ಸಂಸ್ಥೆಗಳನ್ನ ಸ್ಥಾಪನೆ ಮಾಡ್ಬೇಕು. ಅಜ್ಜಯ್ಯನ ಬಗ್ಗೆ ಶಿವಕುಮಾರ್‌ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ನೀವು ಪ್ರಾಮಾಣಿಕವಾಗಿ ಬೆಳೆದು ಬಂದ್ರಾ ಅಂತ ಪ್ರಮಾಣ ಮಾಡಲಿ. ನಾನೂ ಪ್ರಮಾಣ ಮಾಡ್ತೇನೆ. ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿರಿ ಅಂತ ಗೊತ್ತಿದೆ.

Leave a Reply

Your email address will not be published. Required fields are marked *

error: Content is protected !!