ಉದಯವಾಹಿನಿ, ಬೆಂಗಳೂರು : ಪಡಿತರ ಚೀಟಿದಾರರು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆಗಸ್ಟ್ 10ರವರೆಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆ ಅವಕಾಶ ನೀಡಿದೆ.ತಿದ್ದುಪಡಿ ಮಾಡಿಕೊಳ್ಳುವವರು ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್ಲೈನ್ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು.
ಇದಕ್ಕಾಗಿ ಆಗಸ್ಟ್ 10ರವರೆಗೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್‌ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ.ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ. ವಿದ್ಯುತ್ ಬಿಲ್ ದಾಖಲೆ ನೀಡಬೇಕು. ಪಡಿತರ ಚೀಟಿ ತಿದ್ದುಪಡಿ ಮಾಡಿರುವವರು ಇತ್ತೀಚಿನ ವಿದ್ಯುತ್ ಬಿಲ್ಲಿನಲ್ಲಿ ನಮೂದಿಸಿರುವ ವಿದ್ಯುತ್ ಮೀಟರ್ ಆರ್‌ಆರ್ ಸಂಖ್ಯೆ ಮತ್ತು ಲೊಕೇಷನ್ ಕೋಡ್ ನೀಡುವುದು ಕಡ್ಡಾಯ ಮಾಡಲಾಗಿದೆ.

 

Leave a Reply

Your email address will not be published. Required fields are marked *

error: Content is protected !!