ಉದಯವಾಹಿನಿ, ಬೆಂಗಳೂರು : ಇಂದಿನಿಂದ ವಿಧಾನಸಭೆ ಕಲಾಪ ಆರಂಭಗೊಂಡಿದ್ದು, ಇಂದು 181 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಳಿದ ಶಾಸಕರು, ಸಚಿವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ.ಇಂದು 181 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದು, ಉಳಿದವರಿಗೆ ನಾಳೆ ಪ್ರಮಾಣ ವಚನ ಸ್ವೀಕರಿಸುವಂತೆ ಹಂಗಾಮಿ ಸ್ಪೀಕರ್ ಆರ್ ವಿ ದೇಶಪಾಂಡೆ ಸೂಚನೆ ನೀಡಿದ್ದಾರೆ.ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿ ಬಸವರಾಜ ಬೊಮ್ಮಾಯಿ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ತಾಯಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಿನಲ್ಲಿ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಶಿವಗಂಗಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯಪುರ ಕ್ಷೇತ್ರದ ಶಾಸಕರಾಗಿ ಬಸನಗೌಡ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ.ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿ ಬಿ.ನಾಗೇಂದ್ರ, ಮಾಲೂರು ಕ್ಷೇತ್ರದ ಶಾಸಕರಾಗಿ ನಂಜೇಗೌಡ, ಬಳ್ಳಾರಿ ನಗರ ಕ್ಷೇತ್ರದ ಶಾಸಕರಾಗಿ ನಾರ ಭರತ್ ರೆಡ್ಡಿ ಪ್ರಮಾಣವಚನ ಸ್ವೀಕಾರ ಮಾಡಿದರು. ಹನೂರು ಕ್ಷೇತ್ರದ ಶಾಸಕರಾಗಿ ಎಂ.ಆರ್.ಮಂಜುನಾಥ, ಬಾಗಲಕೋಟೆ ಕ್ಷೇತ್ರದ ಶಾಸಕರಾಗಿ ಹೆಚ್.ವೈ.ಮೇಟಿ, ಮಡಿಕೇರಿ ಕ್ಷೇತ್ರದ ಶಾಸಕರಾಗಿ ಡಾ.ಮಂಥರ್ಗೌಡ, ಹಾನಗಲ್ ಕ್ಷೇತ್ರದ ಶಾಸಕರಾಗಿ ಶ್ರೀನಿವಾಸ್ ಮಾನೆ, ದಾಸರಹಳ್ಳಿ ಕ್ಷೇತ್ರದ ಶಾಸಕರಾಗಿ ಎಸ್.ಮುನಿರಾಜು, ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕರಾಗಿ ಮುನಿರತ್ನ ಪ್ರಮಾಣ ವಚನ ಸ್ವೀಕರಿಸಿದರು.

Leave a Reply

Your email address will not be published. Required fields are marked *

error: Content is protected !!