ಉದಯವಾಹಿನಿ, ತುಮಕೂರು: ಸದಸ್ಯತ್ವ ನೋಂದಣಿ ಇವತ್ತು ನೆನ್ನೆಯದು ಅಲ್ಲ ಮಾಜಿ ಪ್ರಧಾನಿ ದೇವೇಗೌಡರ ಹಲವು ವರ್ಷಗಳ ಕನಸು ಈ ಕನಸು ಈಡೇರಬೇಕು ಆ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆ ನೀಡಿದರು.ನಗರದ ಕೊಲ್ಲಾಪುರದಮ ಸಭಾಂಗಣದಲ್ಲಿ ಹಮಿಕೊಂಡಿದ್ದ ಬೂತ್ ಸಮಿತಿ ಅಭಿಯಾನ ಹಾಗೂ ಸದಸ್ಯತ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮೂವತ್ತೊಂದು ಜೆಲ್ಲೆಯಲ್ಲೂ ಸದಸ್ಯತ್ವ ನೋಂದಣಿ ಕಾರ್ಯ ನಡೆಯಲ್ಲಿದ್ದು ಇಂದು ತುಮಕೂರಿನಿಂದ ಪ್ರಾರಂಭ ಮಾಡಿದೇವೆ. ರಾಜ್ಯದಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಬೇಕಾಗಿದೆ ಅಲ್ಲದೆ ಗ್ರಾಮೀಣ ಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಮಾಡುವ ಉದ್ದೇಶ ದಿಂದ ಸದಸ್ಯತ್ವ ನೋಂದಣಿ ಮಾಡಿಸಲಾಗುತ್ತಿದೆ. ಈ ಹಿಂದೆ ತುಮಕೂರು ಜಿಲ್ಲೆಯ ಹನ್ನೊಂದು ಕ್ಷೇತ್ರಗಳ ಪೈಕಿ ಒಂಬತ್ತು ಸ್ಥಾನಗಳನ್ನು ಪಕ್ಷ ಗೆದ್ದಿತ್ತು.ಅದೇ ರೀತಿ ಮುಂದಿನ ದಿನದಲ್ಲೂ ಪಕ್ಷ ಜಿಲ್ಲೆಯಲ್ಲಿ ಸದೃಡವಾಗಬೇಕು ಎಂದರು.ಕಾಂಗ್ರೆಸ್ನವರು ಕುಮಾರಸ್ವಾಮಿಯವರನ್ನು ಐದು ವರ್ಷ ಮುಖ್ಯಮಂತ್ರಿ ಎಂದು ಕರೆದುಕೊಂಡು ಹೋದರು. ಮತ್ತೆ ಮಾಜಿ ಪ್ರಧಾನಿ ದೇವೇಗೌಡರನ್ನು ಲೋಕಸಭೆಗೆ ಕರೆದುಕೊಂಡು ಬಂದು ವಿಶ್ವಾಸ ದ್ರೋಹ ವೆಸಗುವ ಕೆಲಸ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದರು.
ಮುಂದಿನ ದಿನಗಳಲ್ಲಿ ಜಿಪಂ, ತಾಪಂ, ಪಾಲಿಕೆ,ಪುರಸಭೆಯ ಚುನಾವಣೆಗಳು ನಡೆಯುತ್ತವೆ ಆಗ ನಮ ಶಕ್ತಿ ಪ್ರದರ್ಶನ ವಾಗಬೇಕಾಗಿದೆ ಗ್ರಾಮೀಣ ಮಟ್ಟದಲ್ಲಿ ಪಕ್ಷ ಸದೃಡವಾಗಿ ಬೆಳೆದರೆ ಎಲ್ಲಾ ಕಾರ್ಯಕರ್ತರಿಗೂ ಪ್ರಾತಿನಿಧ್ಯ ಕಲ್ಪಿಸಲು ಅವಕಾಶ ಸಿಕ್ಕಂತೆ ಆಗುತ್ತದೆ ಎಂದು ತಿಳಿಸಿದರು. ಪಕ್ಷದ ಕಾರ್ಯಕರ್ತರಿಗೆ ತರಬೇತಿ ಯನ್ನು ನಿರಂತರವಾಗಿ ಮಾಡುತ್ತೇವೆ ,ವಿಚಾರ ಸಂಕಿರಣ ಗಳನ್ನು ಹಮಿಕೊಂಡು ಪಕ್ಷದ ತತ್ವಸಿದ್ದಾಂತಗಳನ್ನು ತಿಳಿಸುವಕೆಲಸ ಮಾಡುತ್ತೇವೆ ಎಂದು ಹೇಳಿದರು. ಜೆಡಿಎಸ್ ಪಕ್ಷದ ಜೆ ಡಿ ಎಲ್ ಪಿ ನಾಯಕ ಹಾಗೂ ಶಾಸಕ ಸುರೇಶ್ ಬಾಬು ಮಾತನಾಡಿ, ಪಕ್ಷವನ್ನು ಕೇಡರ್ ಬೇಸಡ್ ಪಕ್ಷವನ್ನಾಗಿ ಕಟ್ಟಬೇಕಾಗಿದೆ. ಕಳೆದ ಲೋಕಸಭೆಯಲ್ಲಿ ವಿ.ಸೋಮಣ್ಣ ನವರನ್ನು ಗೆಲ್ಲಿಸಲ್ಲು ಪ್ರಾಮಣಿಕ ಪ್ರಯತ್ನ ಮಾಡಿದೇವೆ ಸೋಮಣ್ಣ ಪಕ್ಷದ ಕಾರ್ಯಕರ್ತರನ್ನು ನೆನಪು ಮಾಡಿಕೊಳ್ಳುತ್ತಾರೆ ಪಕ್ಷವನ್ನು ಸದೃಡವಾಗಿ , ಬಲಿಷ್ಠವಾಗಿ ಕಟ್ಟಬೇಕಾಗಿದೆ, ಹಾಸನ ಮತ್ತು ಮಂಡ್ಯ ಜಿಲ್ಲೆಗಿಂತ ಪಕ್ಷ ತುಮಕೂರಿನಲ್ಲಿ ಸದೃಢವಾಗಿದೆ. ಮಂಡ್ಯ ,ಹಾಸನ ಈ ಎರಡು ಜಿಲ್ಲೆಗಳಿಗಿಂತ ತುಮಕೂರು ಜಿಲ್ಲೆಯಲ್ಲಿ ಪಕ್ಷ ಹೆಚ್ಟು ಮತಗಳನ್ನುಗಳಿಸಿದೆ ಎಂದು ಹೇಳಿದರು. ಭೂತ್ ಮಟ್ಟದ ಸಮಿತಿ ರಚನೆ ಮಾಡುವಾಗ ಎಲ್ಲಾ ಜಾತಿಯವರು ಮತ್ತು ಮಹಿಳೆಯರನ್ನು ಹಿರಿಯರನ್ನು ಒಳಗೊಂಡಂತೆ ಪ್ರಾತಿನಿಧ್ಯ ನೀಡಬೇಕು ಪ್ರತಿ ಭೂತ್ ಮಟ್ಟದ ಸದಸ್ಯರಿಂದಲ್ಲೂ ಸದಸ್ಯತ್ವ ಶುಲ್ಕ ಹತ್ತು ರೂಪಾಯಿ ಪಡೆಯಲೇ ಬೇಕು ಆಗ ಕಾರ್ಯಕರ್ತರಲ್ಲಿ ನಾನು ಶುಲ್ಕ ನೀಡಿ ಸದಸ್ಯ ಆಗಿದ್ದೇನೆ ಎಂಬ ಹೆಮೆಯಿಂದ ಇರುತ್ತಾರೆ ಎಂದು ನುಡಿದರು.
