ಉದಯವಾಹಿನಿ, ಬೆಂಗಳೂರು : ಕೂಸುಟ್ಟುವ ಮುನ್ನವೇ ಖುಲಾವಿ ಎನ್ನುವಂತೆ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದೇ ಇದ್ದರೂ ಒಬ್ಬರಿಗೊಬ್ಬರು ನಾನೇ ಮುಖ್ಯಮಂತ್ರಿ ಎಂದು ಪೈಪೋಟಿಗಿಳಿದು ಪರಸ್ಪರ ಮಾತಿನ ಚಕಮಕಿ ನಡೆಸುತ್ತಿದ್ದಾರೆ.ತೆರೆಮರೆಯಲ್ಲಿ ಒಂದಷ್ಟು ಚಟುವಟಿಕೆಗಳು ಕಾಂಗ್ರೆಸ್ನಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಇದರ ನಡುವೆ ಬಹಿರಂಗವಾಗಿಯೇ ಕೆಲವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆ ಮಾಡುತ್ತಿರುವುದು ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಅವರ ನಡುವೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಬಹಿರಂಗ ವಾಗ್ವಾದಗಳು ನಡೆದಿವೆ.

ಶಿವಾನಂದ ಪಾಟೀಲ್ ಕಾಂಗ್ರೆಸ್ನಲ್ಲಿ ಆರಂಭದಿಂದಲೂ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ಆಗಾಗ್ಗೆ ಮುಜುಗರ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಸಚಿವ ಎಂ.ಬಿ.ಪಾಟೀಲ್ ವೀರಶೈವ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ಎಂಬ
ಹೋರಾಟ ರೂಪಿಸಿ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಗ್ಗರಿಸುವಂತೆ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!