ಉದಯವಾಹಿನಿ, ವಿಜಯಪುರ: ರಥವನ್ನು ಎಳೆಯುವ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ದೇವೇಂದ್ರ ಬಡಿಗೇರ್ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಬಿಬಿ ಇಂಗಳಗಿಯಲ್ಲಿ ನಡೆಯುತ್ತಿದ್ದ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ದೇವೇಂದ್ರ ಮೃತಪಟ್ಟಿದ್ದಾನೆ.ಈ ದುರಂತದ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವವಾಗ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!