ಉದಯವಾಹಿನಿ, ಬೆಂಗಳೂರು: ಈಗಾಗಲೇ ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರವನ್ನು ಅಭಿನಂಧಿಸುತ್ತಾ, ಇನ್ಮುಂದೆ ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ, ಶಾಲು, ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ ಎಂದು ಸಚಿವ ಡಾ| ಜಿ.ಪರಮೇಶ್ವರ ಹೇಳಿದ್ದಾರೆ.ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ನನಗೆ ಗೌರವ-ಸನ್ಮಾನದ ರೂಪದಲ್ಲಿ ಹಾಗೂ ಅಭಿಮಾನದಿಂದ ಹಾರ -ತುರಾಯಿ, ಪುಷ್ಪಗುಚ್ಛಗಳು ಮತ್ತು ಶಾಲು-ಶಲ್ಯಗಳನ್ನು ನೀಡುವುದನ್ನು ಅತ್ಯಂತ ವಿನಯ ಪೂರ್ವಕವಾಗಿ ಸ್ವೀಕರಿಸದೇ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಹಾಗೂ ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗಲಿದೆ. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರವನ್ನು ಅಭಿನಂಧಿಸುತ್ತಾ ನಾನೂ ಅವರನ್ನು ಅನುಸರಿಸಲು ಬಯಸಿದ್ದೇವೆ. ಕಾಣಿಕೆಗಳ ಮೂಲಕವೇ ಪ್ರೀತಿ ಮತ್ತು ಗೌರವಗಳನ್ನು ಸಲ್ಲಸಬೇಕೆಂದೇನಿಲ್ಲ. ನಮ್ಮೆಲ್ಲರ ಪ್ರೀತಿ ಅಮಾನ ಸದಾ ನನ್ನ ಮೇಲೆ ಅದಕ್ಕೆ ನಾನು ಋಣಿಯಾಗಿರವೆ ಎಂದು ಹೇಳಿದ್ದಾರೆ.
