ಉದಯವಾಹಿನಿ, ಬೆಂಗಳೂರು : ಪಂಚಖಾತ್ರಿ ಯೋಜನೆ ಗಳನ್ನು ಜಾರಿಗೊಳಿಸಿ, ಬೊಕ್ಕಸವನ್ನು ಬರಿದು ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಆದಾಯ ಮೂಲಗಳನ್ನು ಹುಡುಕಲು ಮುಂದಾಗಿದ್ದು, ಆಸ್ತಿ ನಗದೀಕರಣ (ಅಸೆಟ್ ಮಾನಿಟೈಸೇಷನ್) ಮೂಲಕ ಸಂಪನೂಲ ಕ್ರೂಢೀಕರಣಕ್ಕೆ ಮುಂದಾಗಿದೆ.
ತೆರಿಗೆಯೇತರ ಆದಾಯ ಸಂಪನೂಲಗಳನ್ನು ಹೆಚ್ಚಿಸಲು, ಸರ್ಕಾರದ ಆಸ್ತಿಗಳ ಸಮರ್ಪಕ ಬಳಕೆ, ನಿರ್ವಹಣೆ ಮತ್ತು ತನೂಲಕ ಖಾಸಗಿ ಬಂಡವಾಳವನ್ನು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಅಕರ್ಷಿಸಲು ಸಲಹೆಗಳನ್ನು ನೀಡಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2024- 25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ತೆರಿಗೆಯೇತರ ರಾಜಸ್ವ ಸಂಗ್ರಹ ಸಾಮರ್ಥ್ಯ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಆಸ್ತಿ ನಗದೀಕ ರಣದ ಅವಕಾಶವನ್ನು ಗುರುತಿಸಲು ನಿವೃತ್ತ ಐಎಎಸ್ ಅಧಿಕಾರಿ ಡಾ. ಕೆ.ಪಿ. ಕೃಷ್ಣನ್ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿಯನ್ನು ರಚಿಸಲಾಗಿದೆ.
ಸಮಿತಿಯಲ್ಲಿ ಪರೋಕ್ಷ ತೆರಿಗೆ ಮತ್ತು ಸುಂಕಗಳ ಕೇಂದ್ರಿಯ ಮಂಡಳಿ ಮಾಜಿ ಅಧ್ಯಕ್ಷ ನಜೀಬ್ ಶಾ, ನಿವೃತ್ತ ಐಎಎಸ್ ಅಧಿಕಾರಿ ಎಚ್. ಶಶೀಧರ್, ಐಎಸ್ಇಸಿ ಸಂಸ್ಥೆಯ ಪ್ರೊಫೆಸರ್ ಡಾ. ಕೃಷ್ಣರಾಜು, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸದಸ್ಯರಾಗಿದ್ದಾರೆ.
ರಾಜ್ಯದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಕಾರ್ಯವ್ಯಾಪ್ತಿಯು ಇಲಾಖೆಗಳ ಕೆಲವು ಯೋಜನೆಗಳ ನಿರ್ವಹಣೆ ಮತ್ತು ಅನುಷ್ಠಾನಕ್ಕೆ ಸೀಮಿತಗೊಂಡಿದೆ. ಹೊಸ ಮೂಲ ಸೌಕರ್ಯಗಳು ಹಾಗೂ ಸಂಪನೂಲಗಳನ್ನು ಸೃಷ್ಟಿಸಿ ರಾಜ್ಯವನ್ನು ಅಭಿವೃದ್ದಿಯ ಪಥದಲ್ಲಿ ಕೊಂಡೊಯ್ಯುವ ವಿಶಾಲ ಕಾರ್ಯವ್ಯಾಪ್ತಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಪಾಲುಗಾರಿಕೆಯನ್ನು ಹೆಚ್ಚಿಸಲು, ಆಸ್ತಿ ನಗದೀಕರಣ ಗುರುತಿಸಲು ಸಮಿತಿ ಕೆಲಸ ನಿರ್ವಹಿಸಬೇಕಿದೆ ಎಂದು ಕಳೆದ ಆಗಸ್ಟ್ 23ರಂದು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
