ಉದಯವಾಹಿನಿ,ಬೆಂಗಳೂರು : ನೂತನ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಪಕ್ಷಕ್ಕೆ ದೇಶದ ಅಭಿವೃದ್ಧಿಯ ಬಗ್ಗೆ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.ಕಾಂಗ್ರೆಸ್ ರಾಷ್ಟ್ರದ ವಿಶಾಲ ಹಿತಾಸಕ್ತಿಯ ಬಗ್ಗೆ ಯೋಚಿಸಬೇಕಾಗಿತ್ತು ಆದರೆ ಅವರು ಕ್ಷುಲ್ಲಕ ರಾಜಕೀಯದಲ್ಲಿದ್ದಾರೆ, ಅವರಿಗೆ ಭಾರತದ ಅಭಿವೃದ್ಧಿಯಲ್ಲಿ ಆಸಕ್ತಿ ಇಲ್ಲ, ಇದಲ್ಲದೇ ಭಾರತದ ಸಮಗ್ರತೆ ಮತ್ತು ಏಕತೆಯ ಬಗ್ಗೆ ಆಸಕ್ತಿ ಇಲ್ಲ’ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.ಪ್ರಧಾನಿ ಮೋದಿ ಮೇ 28 ರಂದು ಹೊಸ ಸಂಸತ್ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಬ್ರಿಟಿಷರಿಂದ ಭಾರತಕ್ಕೆ ಅಧಿಕಾರ ಹಸ್ತಾಂತರದ ಸಂಕೇತವಾದ ‘ಸೆಂಗೋಲ್’ ಅನ್ನು ಹೊಸ ಸಂಸತ್ ಕಟ್ಟಡದಲ್ಲಿ ಪರಂಪರೆಯಾಗಿ ಇಡಲಾಗುವುದು.

Leave a Reply

Your email address will not be published. Required fields are marked *

error: Content is protected !!