ಉದಯವಾಹಿನಿ,ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವನೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷವು ಮತದಾರರಿಗೆ ತಲಾ 5,000 ಸಾವಿರ ರೂಪಾಯಿ ಮೌಲ್ಯದ ಕೂಪನ್​ಗಳನ್ನು ಹಂಚಿ ಗೆದ್ದಿದೆ ಎಂದು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.ಈ ಕುರಿತು ಜೆಡಿಎಸ್​ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಚ್​ಡಿಕೆ ಕಾಂಗ್ರೆಸ್​ ವಿರುದ್ಧ ಸರಣಿ ಆರೋಪಗಳನ್ನು ಮಾಡುವ ಮೂಲಕ ಹರಿಹಾಯ್ದಿದ್ದಾರೆ.ಅಕ್ರಮ ಎಸಗಿದ್ದಾರೆ ಮತದಾನ ನಡೆಯುವ ಮುನ್ನಾ ದಿನ ಕಾಂಗ್ರೆಸ್​ ಅಭ್ಯರ್ಥಿಗಳು ಮತದಾರರಿಗೆ ಕೂಪನ್​ಗಳನ್ನು ಹಂಚಿದ್ದಾರೆ. ರಾಮನಗರ, ಮಾಗಡಿ,ರಾಜರಾಜೇಶ್ವರಿ ನಗರ ಸೇರಿದಂತೆ ರಾಜ್ಯದ 45ರಿಂದ 50 ವಿಧಾನಸಭೆ ಕ್ಷೇತ್ರಗಳಲ್ಲಿಈ ರೀತಿಯ ಅಕ್ರಮವನ್ನು ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೋಡ್​ಗಳು ಉಳ್ಳ ಈ ಕೂಪನ್​ಗಳೇ ಕಾರಣ. ಇದು ಗಂಭೀರ ಸ್ವರೂಪದ ಚುನಾವಣೆ ಅಕ್ರಮ ಎಂದು ದೂರಿದ್ದಾರೆ.ಮೂರು ಸಾವಿರ ಹಾಗೂ ಐದು ಸಾವಿರ ಮೊತ್ತದ ಕ್ಯೂ ಆರ್ ಕೋಡ್​ಗಳನ್ನು ಹೊಂದಿರುವ ಕೂಪನ್​ಗಳನ್ನು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಮತದಾರರಿಗೆ ಹಂಚಲಾಯಿತು. ಈ ಕೂಪನ್ ಗಳಿಂದಲೇ ನಾವು ಸೋಲಬೇಕಾಯಿತು. ಕಾಂಗ್ರೆಸ್ ಅಕ್ರಮವಾಗಿ ಗೆದ್ದಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೀರಾ ಮಿಸ್ಟರ್ ಸಿದ್ದರಾಮಯ್ಯ ಎಂದು ಹರಿಹಾಯ್ದಿದ್ದಾರೆ.

Leave a Reply

Your email address will not be published. Required fields are marked *

error: Content is protected !!