ಉದಯವಾಹಿನಿ, ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದು,ಇದರಿಂದ ಗೌರಿ ಕೊಲೆ ಪ್ರಕರಣ ೧೮ ಆರೋಪಿಗಳ ಪೈಕಿ ೮ ಮಂದಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಂತಾಗಿದೆ.
ಪ್ರಕರಣದಲ್ಲಿ ೬ನೇ ಆರೋಪಿ ಬೆಳಗಾವಿಯ ಭರತ್ ಜಯವಂತ್ ಕುರಾನೆ, ೯ನೇ ಆರೋಪಿ ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಾಲೇಕರ್, ೧೩ನೇ ಆರೋಪಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಸುಜಿತ್ ಕುಮಾರ್, ೧೬ನೇ ಆರೋಪಿ ಮಹಾರಾಷ್ಟ್ರದ ಔರಂಗಾಬಾದ್‌ನ ಶ್ರೀಕಾಂತ್ ಪಂಗಾರ್ಕರ್ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.  ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು.

ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲಾ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು.
ಅರ್ಜಿದಾರರು ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಇಂಥಹದ್ದೇ ಆರೋಪದಲ್ಲಿ ಮತ್ತೆ ಭಾಗಿಯಾಗುವಂತಿಲ್ಲ.

Leave a Reply

Your email address will not be published. Required fields are marked *

error: Content is protected !!