ಉದಯವಾಹಿನಿ, ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಕರ್ನಾಟಕದಲ್ಲಿಯೇ ಕುತೂಹಲದ ಕಣವಾಗಿ ಮಾರ್ಪಡುತ್ತಿದೆ. ಒಂದೆಡೆ ಕಾಂಗ್ರೆಸ್​​ನಿಂದ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರೇ ಚನ್ನಪಟ್ಟಣ ಉಪಚುನಾವಣೆ ಬಗ್ಗೆ ಕಾಳಜಿ ವಹಿಸಿದ್ದರೆ, ಇತ್ತ ಕ್ಷೇತ್ರವನ್ನು ತಮ್ಮ ಹಿಡಿತದಿಂದ ಬಿಟ್ಟುಕೊಡದೇ ಇರಬೇಕೆಂಬುದು ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಆಶಯ. ಆದರೆ, ಅತ್ತ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಬಿಜೆಪಿ ಟಿಕೆಟ್​​ಗೆ ಪಟ್ಟು ಹಿಡಿದಿದ್ದು, ತೆರೆಯ ಮರೆಯಿಂದ ಕಸರತ್ತು ನಡೆಸುತ್ತಿದ್ದಾರೆ. ಪ್ರಚಾರ ಕಾರ್ಯವನ್ನೂ ಶುರು ಮಾಡಿದ್ದಾರೆ. ಇದು ಎನ್​ಡಿಎ ಮೈತ್ರಿಕೂಟದಲ್ಲಿ ಟಿಕೆಟ್ ಪೈಪೋಟಿ ಹೆಚ್ಚಿಸಿದೆ.

ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ತಲೆನೋವಾಗಿ ಪರಿಣಮಿಸಿರುವ ಬೆನ್ನಲ್ಲೇ ಹೆಚ್​ಡಿ ಕುಮಾರಸ್ವಾಮಿ ಮತ್ತೊಂದು ತಂತ್ರದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿರುವ ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್​ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಜೆಡಿಎಸ್ ಅಭ್ಯರ್ಥಿಯನ್ನು ಅಂತಿಮಗೊಳಿಸುವುದು ಕುಮಾರಸ್ವಾಮಿ ಲೆಕ್ಕಾಚಾರವಾಗಿದೆ.

 

Leave a Reply

Your email address will not be published. Required fields are marked *

error: Content is protected !!