ಉದಯವಾಹಿನಿ, ಬೆಂಗಳೂರು : ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಆಸ್ಪತ್ರೆಯ 3 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದೆ ಎಂದು ತಿಳಿದು ಬಂದಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಎಂ.ಎಸ್.ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯ ಕಾರ್ಡಿಯಾಕ್ ಐಸಿಯುನಲ್ಲಿ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನರ್ಸ್ ಗಳ ಸಮಯ ಪ್ರಜ್ಞೆಯಿಂದ ರೋಗಿಗಳನ್ನು ತಕ್ಷಣ ಶಿಫ್ಟ್ ಮಾಡಲಾಗಿದೆ. ನರ್ಸ್ ಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!