ಉದಯವಾಹಿನಿ, ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ನಾಳೆ ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲಿ ದರ್ಶನ್ ಗೆ ಐಟಿ ಡ್ರಿಲ್ ನಡೆಸಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 70 ಲಕ್ಷ ರೂ. ಸಿಕ್ಕಿರುವ ಕಾರಣ ಐಟಿ ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.
ಜೈಲಿನಲ್ಲಿರುವ ಆರೋಪಿ ದರ್ಶನ್ ಅವರನ್ನು ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದರು. ದರ್ಶನ್ ವಿಚಾರಣೆ ನಡೆಸಲು ಐಟಿ ಅಧಿಕಾರಿಗಳಿಗೆ ಅನುಮತಿ ನೀಡಲಾಗಿದ್ದು, ನಾಳೆ ಬಳ್ಳಾರಿ ಜೈಲಿಗೆ ಹೋಗಿ ದರ್ಶನ್ ರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆ ಸೆ.27 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಮುಂದೂಡಿಕೆ ಬೆನ್ನಲ್ಲೇ ಐಟಿ ಅಧಿಕಾರಿಗಳು ಬಳ್ಳಾರಿ ಜೈಲಿನಲ್ಲಿ ದರ್ಶನ್ ಗೆ ಐಟಿ ಡ್ರಿಲ್ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!