ಉದಯವಾಹಿನಿ, ಬೆಂಗಳೂರು: ಪ್ರಸಕ್ತ 2024-25ನೇ ಸಾಲಿನ ಕರ್ನಾಟಕ ವಿಧಾನಮಂಡಲದ 9 ವಿವಿಧ ಜಂಟಿ ಸ್ಥಾಯಿ ಸಮಿತಿಗಳು ಹಾಗೂ 6 ಸ್ಥಾಯಿ ಸಮಿತಿಗಳನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ರವರು ರಚನೆ ಮಾಡಿದ್ದಾರೆ. ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಸಿ.ಸಿ. ಪಾಟೀಲ್‌ ಅವರನ್ನು ನೇಮಕ ಮಾಡಲಾಗಿದ್ದು, ಹಿರಿಯ ಶಾಸಕರಾದ ಆರ್‌.ವಿ. ದೇಶಪಾಂಡೆ ಸೇರಿದಂತೆ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ ನಾಲ್ವರು ಸದಸ್ಯರು ಸಮಿತಿಯ ಸದಸ್ಯರಾಗಿದ್ದಾರೆ.

ಸಾರ್ವಜನಿಕ ಉದ್ದಿಮೆಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಬಸವರಾಜ್‌ ನೀಲಪ್ಪ ಶಿವಣ್ಣನವರ್‌, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕವಾಗಿದ್ದಾರೆ. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎ.ಆರ್‌.ಕೃಷ್ಣಮೂರ್ತಿ, ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರಾಗಿ ಶಾಸಕ ಬಿ.ಶಿವಣ್ಣ, ಸದಸ್ಯರಾಗಿ ವಿಧಾನಸಭೆಯ 16 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ. ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಹೆಚ್‌,ಡಿ,ರೇವಣ್ಣ ಹಾಗೂ ಸದಸ್ಯರಾಗಿ ವಿಧಾನಸಭೆಯ 15 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕವಾಗಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾಗಿ ಶಾಸಕ ಎನ್‌. ಎಚ್‌. ಕೋನರೆಡ್ಡಿ, ಸದಸ್ಯರಾಗಿ ವಿಧಾನಸಭೆಯ 14 ಸದಸ್ಯರು ಹಾಗೂ ವಿಧಾನ ಪರಿಷತ್ತಿನ 5 ಸದಸ್ಯರು ನೇಮಕಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!