ಉದಯವಾಹಿನಿ, ನವದೆಹಲಿ: ಪ್ರತಿಪಕ್ಷಗಳ ಬಹಿಷ್ಕಾರದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಇಂದು (ಮೇ 28) ಹೊಸ ಸಂಸತ್​ ಭವನವನ್ನು ಉದ್ಘಾಟಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಅವರನ್ನು ಅವಮಾನಿಸಲಾಗಿದೆ ಎಂದು ಪ್ರತಿಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ.ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಸಂಸತ್ತು ಜನರ ಧ್ವನಿ! ಸಂಸತ್ ಭವನದ ಉದ್ಘಾಟನೆಯನ್ನು ಪ್ರಧಾನಿ ಪಟ್ಟಾಭಿಷೇಕ ಎಂದು ಪರಿಗಣಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ರಾಷ್ಟ್ರಪತಿಗೆ ಆಹ್ವಾನ ನೀಡದಿರುವುದು ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ದೇಶದ ರಾಷ್ಟ್ರಪತಿ ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಈ ಹಿಂದೆ ಕಿಡಿಕಾರಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ರಾಹುಲ್, ಸಂಸತ್ತು ಅಹಂಕಾರದ ಇಟ್ಟಿಗೆಗಳಿಂದ ಕಟ್ಟಿಲ್ಲ. ಸಾಂವಿಧಾನಿಕ ಮೌಲ್ಯಗಳಿಂದ ಸಂಸತ್ ಕೂಡಿದೆ ಎಂದು ಹೇಳಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!