ಉದಯವಾಹಿನಿ, ಬೆಂಗಳೂರು: ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮಾಯಿ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರನ್ನು ಅವರ ಧವಳಗಿರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದರು.
ಬಿಎಸ್‌‍ವೈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮಾಯಿ, ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಎಂದು ಕೇಳಿದರು. ಎಲ್ಲ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಹೇಳಿದ್ದೇನೆ ಎಂದು ತಿಳಿಸಿದರು.  ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೇ ಟಿಕೆಟ್‌ ಕೊಟ್ಟರೂ ಗೆಲ್ಲಿಸಬೇಕು. ಅ.19ರ ನಂತರ ದೆಹಲಿಗೆ ತೆರಳುತ್ತಿದ್ದು, ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುವುದಕ್ಕೆ ಪ್ರಯತ್ನ ಮಾಡೋಣ ಅಂದಿದ್ದಾರೆ ಎಂದು ಅವರು ಹೇಳಿದರು. ಚನ್ನಪಟ್ಟಣ ಟಿಕಟ್‌ ಕುರಿತು ಕೇಳಿದ ಪ್ರಶ್ನೆಗೆ ಚನ್ನಪಟ್ಟಣದ ಬಗ್ಗೆ ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಹಾಗೂ ನಮ ಪಕ್ಷದ ಹೈಕಮಾಂಡ್‌ ಸೇರಿ ತೀರ್ಮಾನ ಮಾಡುತ್ತಾರೆ.

Leave a Reply

Your email address will not be published. Required fields are marked *

error: Content is protected !!