ಉದಯವಾಹಿನಿ, ಹುಬ್ಬಳ್ಳಿ: ಕಾಂಗ್ರೆಸ್ ಸೇರುವ ಮುನ್ನಾ ಯಾವುದೇ ಷರತ್ತು ಹಾಕದೆ ಹೋಗಿದ್ದೇನೆ. ಸಂಪುಟದಲ್ಲಿ ಸಚಿವನಾಗಿರಬೇಕು ಎನ್ನುವ ಜನರ ಈಡೇರಿಲ್ಲ. ಇನ್ನು ಹಲವು ಸ್ಥಾನಗಳಿದ್ದು, ಯಾವುದೇ ಜವಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ.ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು ಆದರೆ ಆಗಿಲ್ಲ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ ಎಂದರು.

Leave a Reply

Your email address will not be published. Required fields are marked *

error: Content is protected !!