ಉದಯವಾಹಿನಿ, ಕರೀಂನಗರ: ತೆಲಂಗಾಣದ ಜಗ್ತಿಯಾಲ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಆಡಳಿತಾರೂಢ ಕಾಂಗ್ರೆಸ್ ನಾಯಕರೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಕೊಲೆಯಾದ ಕಾಂಗ್ರೆಸ್ ಮುಖಂಡರನ್ನು ಮಾರು ಗಂಗರೆಡ್ಡಿ ಎಂದು ಗುರುತಿಸಲಾಗಿದೆ.
ಜಗ್ತಿಯಾಲ್ ಜಿಲ್ಲೆಯ ಜಬಿತಾಪುರ್ ಗ್ರಾಮದಲ್ಲಿ ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದ ಮಾರು ಗಂಗರೆಡ್ಡಿ (56) ಕಾರೊಂದು ಡಿಕ್ಕಿ ಹೊಡೆದಿದೆ. ಅವರು ಕೆಳಗೆ ಬಿದ್ದಾಗ, ಕಾರಿನಿಂದ ಇಳಿದ ಒಬ್ಬ ವ್ಯಕ್ತಿ ಏಕಾಏಕಿ ಅವರ ಮೇಲೆ ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಂಗರೆಡ್ಡಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಜಗ್ತಿಯಾಲ್‌ನ ಸರ್ಕಾರಿ ಕೇಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಎಂಎಲ್ ಸಿ ಜೀವನ್ ರೆಡ್ಡಿ ಅವರ ಆಪ್ತರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆರೋಪಿ ಮತ್ತು ಮೃತರ ನಡುವಿನ ವೈಷಮ್ಯ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಆರೋಪಿ ತಲೆಮರೆಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!