ಉದಯವಾಹಿನಿ, ನರಸಿಂಹರಾಜಪುರ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಒಂದು ಗಂಟೆ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಿತು. ರಭಸದ ಮಳೆಯಿಂದ ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಸಲವಾನಿ ಗ್ರಾಮದಿಂದ ಗೇರುಬೈಲು ಗ್ರಾಮಕ್ಕೆ ಹೋಗುವ ರಸ್ತೆಯ ಮೇಲೆ ಕೆರೆ ದಂಡೆ ಒಡೆದು, ನೀರು ಹರಿದು ರಸ್ತೆಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರು ಭೇಟಿ ನೀಡಿ ಪರಿಶೀಲಿಸಿದರು. ಸೋಮವಾರ ಸಂಜೆ ತುಂತುರು ಮಳೆ ಸುರಿಯಿತು. ಭಾನುವಾರದಿಂದ ಸೋಮವಾರ ಬೆಳಿಗ್ಗೆವರೆಗೆ 24 ಗಂಟೆಗಳ ಅವಧಿಯಲ್ಲಿ ನರಸಿಂಹರಾಜಪುರದಲ್ಲಿ 4.32 ಸೆಂ.ಮೀ, ಮೇಗರಮಕ್ಕಿಯಲ್ಲಿ 4.2 ಸೆಂ.ಮೀ ಹಾಗೂ ಬಾಳೆಹೊನ್ನೂರಿನಲ್ಲಿ 2.4 ಸೆಂ.ಮೀ ಮಳೆಯಾಗಿದೆ.
