ಉದಯವಾಹಿನಿ, ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಮಂಗಳವಾರ ಆಲಮಟ್ಟಿ ಜಲಾಶಯದಿಂದ 35 ಸಾವಿರ ಕ್ಯೂಸೆಕ್ ನೀರು ಹರಿದುಬಂದಿದೆ. ಬಸವಸಾಗರ ಜಲಾಶಯದ 6 ಕ್ರಸ್ಟ ಗೇಟ್‌ಗಳ ಮೂಲಕ 30 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.
ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವ ಕಾರಣ ಬಸವಸಾಗರ ಜಲಾಶಯಕ್ಕೆ ಮಂಗಳವಾರ 35 ಸಾವಿರ ಕ್ಯೂಸೆಕ್ ನೀರು ಹರಿದು ಬಂದಿದೆ.ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು ಬಿಡಲಾಗುತ್ತದೆ ಎಂದು ಕೆಬಿಜೆಎನ್‌ಎಲ್ ಮೂಲಗಳು ತಿಳಿಸಿವೆ. ಗರಿಷ್ಠ ಮಟ್ಟದಲ್ಲಿ ಇಂದು 492.20 ಮೀಟರ್ ನೀರಿದ್ದು, 30.07 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ. ಒಳಹರಿವು 35 ಸಾವಿರ ಕ್ಯೂಸೆಕ್‌ನಷ್ಟಿದೆ ಎಂದು ಹೇಳಿವೆ.

Leave a Reply

Your email address will not be published. Required fields are marked *

error: Content is protected !!