ಉದಯವಾಹಿನಿ, ಜೈಪುರ: ಕಾರಿನ ಟೈರ್ ಸಿಡಿದು ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಸಿರೋಹಿ ಜಿಲ್ಲೆಯ ಹೆದ್ದಾರಿಯೊಂದರಲ್ಲಿ ಟೈರ್ ಒಡೆದ ಪರಿಣಾಮ ಕಾರು ಪಲ್ಟಿಯಾಗಿ ಇಂದು ಬೆಳಗ್ಗೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಕುಟುಂಬವು ಜೋಧಪುರಕ್ಕೆ ತೆರಳುತ್ತಿದ್ದಾಗ ಬೇವಾರರ್-ಪಿಂಡ್ವಾರಾ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು. ಚಾಲಕ ಕಾರನ್ನು ಅತಿವೇಗದಲ್ಲಿದ್ದ ಚಲಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಕಾರಿನ ಟೈರ್ ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಐದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!