ಉದಯವಾಹಿನಿ,ಬೆಂಗಳೂರು: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಪ್ರತಿ ವರ್ಷ ಅಕ್ಟೋಬರ್ ೩೧ ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು ದೇಶದಾದ್ಯಂತ ರಾಷ್ಟ್ರೀಯ ಏಕತಾ ದಿನ ಎಂದು ಆಚರಿಸಲಾಗುತ್ತದೆ. ದಿ.೩೧.೧೦.೨೦೨೪ ಪ್ರಾರ್ಥನಾ ಸಮಯದಲ್ಲಿ ಶಾಲಾ ಮಟ್ಟದಲ್ಲಿ ಶಿಕ್ಷಕರು ದೇಶದ ಏಕೀಕರಣಕ್ಕಾಗಿ,ಭದ್ರತೆಗಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್, ಅವರ ಸಮರ್ಪಣೆಯನ್ನು ಮಕ್ಕಳಿಗೆ ತಿಳಿಸಬೇಕು.ಮತ್ತು ಈ ಕೆಳಗಿನ ಪ್ರತಿಜ್ಞೆ ಕೈಗೊಳ್ಳಬೇಕು.
ಪಟೇಲ್ರವರ ದೂರದೃಷ್ಟಿ, ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಬೇಕು, ಜಾಥಾ, ಏಕತಾ ಓಟ ಮೂಲಕ ಅವರ ಸಂದೇಶವನ್ನು ಎಲ್ಲರಿಗೂ ಸಾರಬೇಕು.
ರಾಷ್ಟ್ರೀಯ ಏಕತಾ ದಿನ ಪ್ರತಿಜ್ಞೆ: ರಾಷ್ಟ್ರದ ಏಕತೆ ಸಮಗ್ರತೆ ಮತ್ತು ಭದ್ರತೆಯನ್ನು ಸಂರಕ್ಷಿಸುತ್ತೇನೆ ದೇಶವಾಸಿಗಳಲ್ಲಿ ಈ ಸಂದೇಶವನ್ನು ಹರಡಲು ಶ್ರಮಿಸುತ್ತೇನೆ ಎಂದು ನಾನು ಪ್ರಾಮಾಣಿಕವಾಗಿ ಪ್ರತಿಜ್ಞೆ ಮಾಡುತ್ತೇನೆ.ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ನನ್ನ ದೇಶದ ಏಕತೆಗೆ ಉತ್ಸಾಹದಿಂದ ನಾನು ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇನೆ. ನನ್ನ ದೇಶದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನನ್ನದೇ ಆದ ಕೊಡುಗೆಯನ್ನು ನೀಡಲು ನಾನು ಸಂಕಲ್ಪ ಮಾಡುತ್ತೇನೆ.
