ಉದಯವಾಹಿನಿ, ಇಂಫಾಲ: ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಪೊಲೀಸ್ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಮಣಿಪುರದಲ್ಲಿ ನಡೆದಿದೆ. ಮಣಿಪುರ ಪೊಲೀಸ್ ಪೇದೆಯೊಬ್ಬರು ಮಾತಿನ ಚಕಮಕಿಯ ನಂತರ ತನ್ನ ಹಿರಿಯ ಸಹೋದ್ಯೋಗಿ, ಸಬ್ ಇನ್ಸ್ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಯ ಮೇಲೆ ಮಾರಣಾಂತಿಕವಾಗಿ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾನ್್ಸಟೆಬಲ್ ಬಿಕ್ರಿಮ್ಜಿತ್ ಸಿಂಗ್ ಅವರಿಂದ ಕೊಲೆಯಾದ ಎಸ್ಐ ಅನ್ನು ಪಹಜಹಾನ್ ಎಂದು ಗುರುತಿಸಲಾಗಿದೆ.
ಮಣಿಪುರದ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಯಲ್ಲಿ ಇಬ್ಬರ ನಡುವೆ ಸಂಭವಿಸಿದ ಜಗಳದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಸ್ತುತ ಹೆಚ್ಚಿನ ಭದ್ರತೆಯಲ್ಲಿರುವ ಪ್ರದೇಶವಾದ ಮೊಂಗ್ಬಂಗ್ ಗ್ರಾಮ ಪೊಲೀಸ್ ಪೋಸ್ಟ್ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
