ಉದಯವಾಹಿನಿ, ನವದೆಹಲಿ: ವಿಧಾನಸಭಾ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಮಾಜಿ ಸಚಿವ ಮತ್ತು ಆಪ್ ನಾಯಕ ಕೈಲಾಶ್ ಗೆಹ್ಲೋಟ್ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪಕ್ಷದ ನಿರ್ದೇಶನ ಮತ್ತು ಆಂತರಿಕ ಸವಾಲುಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಭಾನುವಾರ ಎಎಪಿಗೆ ರಾಜೀನಾಮೆ ನೀಡಿದ್ದ ಗೆಹ್ಲೋಟ್, ಇಂದು ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಎಎಪಿಗೆ ರಾಜೀನಾಮೆ ನೀಡಿದ ಕುರಿತು ಮಾತನಾಡಿದ ಕೈಲಾಶ್ ಗೆಹ್ಲೋಟ್, ಇದು ನನಗೆ ಸುಲಭದ ಹೆಜ್ಜೆಯಲ್ಲ. ನಾನು ಅಣ್ಣಾಜಿಯವರ ಕಾಲದಿಂದಲೂ ಎಎಪಿಯೊಂದಿಗೆ ಸಂಬಂಧ ಹೊಂದಿದ್ದೇನೆ ಮತ್ತು ದೆಹಲಿಯ ಜನರಿಗಾಗಿ ನಿರಂತರವಾಗಿ ಕೆಲಸ ಮಾಡಿದ್ದೇನೆ. ಒತ್ತಡದಲ್ಲಿ ನಾನು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಭಾವಿಸುವ ಪ್ರತಿಯೊಬ್ಬರಿಗೂ ನಾನು ಹೇಳಲು ಬಯಸುತ್ತೇನೆ. ನಾನು ಯಾವತ್ತೂ ಒತ್ತಡದಲ್ಲಿ ಏನನ್ನೂ ಮಾಡಿಲ್ಲ. ನಾನು ಎಎಪಿಗೆ ಸೇರಲು ನನ್ನ ವಕೀಲ ವೃತ್ತಿಯನ್ನು ತೊರೆದಿದ್ದೇನೆ ಮತ್ತು ನಮ್ಮ ಏಕೈಕ ಉದ್ದೇಶ ದೆಹಲಿಯ ಜನರಿಗೆ ಸೇವೆ ಸಲ್ಲಿಸುವುದಾಗಿದೆ ಎಂದರು.
