ಉದಯವಾಹಿನಿ, ಉಡುಪಿ: ೧೭ ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಸಾದ ಎಸ್. ಎಸ್ ಎಂಬವರು ದೂರು ದಾಖಲಿಸಿದ್ದು, ಅವರ ಮನೆಯಲ್ಲಿ ಹೋಂ ನರ್ಸ ಆಗಿ ಕೆಲಸ ಮಾಡಿಕೊಂಡಿದ್ದ, ಸಿದ್ದಪ್ಪ ಕೆ. ಕೊಡ್ಲಿ ಎಂಬಾತನು ದಿನಾಂಕ: ೧೭/೧೧/೨೪ ರಂದು ಬೆ: ೦೯-೧೫ ಗಂಟೆಯಿಂದ ಮ: ೧-೧೫ ಘಂಟೆಯ ಮದ್ಯಾವಧಿಯಲ್ಲಿ ಅವರ ಮನೆಯ ಹಾಲ್ ನ ಗಾಜಿನ ಬೀರುವಿನಲ್ಲಿ ಹಾಗೂ ಮಲಗುವ ಕೋಣೆಯಲ್ಲಿ ಇರಿಸಿದ್ದ ಗ್ರಾಡ್ರೇಜ್ ನ ಲಾಕರ್ ನಲ್ಲಿ ಇರಿಸಿದ್ದ ಸುಮಾರು ೪೨೭ ಗ್ರಾಂ ತೂಕದ ರೂ: ೩೧,೧೭,೧೦೦/- ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : ೧೯೪/೨೦೨೪ ಕಲಂ: ೩೦೬ ಃಓS ನಂತೆ ಪ್ರಕರಣ ದಾಖಲಾಗಿರುತ್ತದೆ.

ಸದ್ರಿ ಪ್ರಕರಣದ ತನಿಖೆಯನ್ನು ಪಿ.ಐ, ರಾಮಚಂದ್ರ ನಾಯಕ್ , ಉಡುಪಿ ನಗರ ಠಾಣೆರವರು ಕೈಗೊಂಡು ಆರೋಪಿ ಮತ್ತು ಸ್ವತ್ತು ತನಿಖೆಯನ್ನು ಪತ್ತೆಯ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣಾ ಪಿಎಸ್‌ಐ ಈರಣ್ಣ ಶಿರಗುಂಪಿ, ಪುನೀತ್, ಉಡುಪಿ ಸೆನ್ ಪೊಲೀಸ್ ಠಾಣೆ ಪಿ. ಎಸ್. ಐ ಪವನ್ ಕುಮಾರ್, ಉಡುಪಿ ನಗರ ಠಾಣೆಯ ಅಬ್ದುಲ್ ಬಶೀರ್, ಸಂತೋಷ, ಚೇತನ್ ಮತ್ತು ಸೆನ್ ಠಾಣೆಯ ಪ್ರವೀಣ ಕುಮಾರ್, ಪ್ರವೀಣ ರವರ ತಂಡ ದಿನಾಂಕ : ೧೯/೧೧/೨೦೨೪ ರಂದು ಆರೋಪಿ ಸಿದ್ದಪ್ಪ ಕೆ. ಕೊಡ್ಲಿ(೨೩), ಕುಷ್ಟಗಿ ತಾಲ್ಲೂಕು, ಕೊಪ್ಪಳ ಇತನನ್ನು ದಸ್ತಗಿರಿಗೊಳಿಸಿ, ಕಳವು ಮಾಡಿ ಅಡಗಿಸಿಟ್ಟಿದ್ದ ಸ್ಥಳದಿಂದ ಅಂದಾಜು ರೂ: ೩೦,೦೦,೦೦೦/- ಮೌಲ್ಯದ ೩೭೪.೪೫ ಗ್ರಾಮ್ಸ್ ತೂಕದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!