ಉದಯವಾಹಿನಿ: ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಕಳೆದ ಲೋಕಸಭೆ ಚುನಾವಣೆ ವೇಳೆ ವಿದ್ಯಾರ್ಥಿಗಳಿಗೆ ಆಮಿಷ ಒಡ್ಡಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಸಲ್ಲಿಸಿದ್ದ ಅರ್ಜಿಯ ದೂರನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಕಳೆದ ಲೋಕಸಭೆ ಚುನಾವಣೆ ವೇಳೆ ಖಾಸಗಿ ಕಾಲೇಜಿನ ಆವರಣದಲ್ಲಿ ರಾಜಕೀಯ ಭಾಷಣ ಮಾಡಿ ವಿದ್ಯಾರ್ಥಿಗಳಿಗೆ ಆಮಿಷ ಒಡ್ಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಗೊಳಿಸಿದೆ. ಕಟಪಾಡಿ ಗ್ರಾಮ ಉಡುಪಿ ಜಿಲ್ಲೆಯ ಕಾಪು ತಾಲೂಕಿನ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಚುನಾವಣಾ ಟ್ರಾಫಿಕ್ ವಿಜಿಲೆನ್ಸ್ ಅಧಿಕಾರಿ ತಮ್ಮ ವಿರುದ್ಧ ನೀಡಿರುವ ದೂರನ್ನು ರದ್ದುಗೊಳಿಸುವಂತೆ ಕೋರಿ ಸಂಸದರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಚುನಾವಣಾ ಟ್ರಾಫಿಕ್ ವಿಜಿಲೆನ್ಸ್ ಅಧಿಕಾರಿ ಅರುಣ್ ಶ್ಯಾಮ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ. ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ ೧೮೮ ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಈ ಅಧಿಕಾರ ವಿಕೇಂದ್ರೀಕೃತವಾಗಿಲ್ಲ. ಆದ್ದರಿಂದ ಈ ಖಾಸಗಿ ದೂರನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
