ಉದಯವಾಹಿನಿ, ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಐದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ ೩೪ ಕೋಟಿ ವರ್ಗಾವಣೆಯಾಗಿರುವುದನ್ನು ಪತ್ತೆಹಚ್ಚಿದ್ದಾರೆ.

ಸಿಐಡಿ ಅಧಿಕಾರಿಗಳು ತನಿಖೆ ಎದುರಿಸಿದ್ದ ಜೀವಾ ಅವರ ಖಾತೆಗೆ ೭ ಕೋಟಿ ೧೬ ಲಕ್ಷ ರೂ. ಜಮೆಯಾಗಿದೆ.ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ, ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ, ಮಾಜಿ ಅಧೀಕ್ಷಕ ಸುಬ್ಬಪ್ಪ ಅವರು ತಮ್ಮ ನೆರೆಹೊರೆಯವರು, ಬಾಡಿಗೆದಾರರು ಸಂಬಂಧಿಕರ ಹೆಸರಿನಲ್ಲಿ ನಕಲಿ ಕಂಪನಿ ತೆರೆದಿದ್ದು, ಅವರ ಖಾತೆಗಳಿಗೆ ಹಣ ಜಮೆಯಾಗಿದೆ.
ಹಗರಣ ಸಂಬಂಧ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ ಅವರು, ಐದು ದಿನಗಳ ಹಿಂದೆ ಪದ್ಮನಾಭನಗರದ ರಾಘವೇಂದ್ರ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ಅಕ್ರಮ ಹಣ ವರ್ಗಾವಣೆ ಶೋಧಿಸಿರುವ ಸಿಐಡಿ, ಐದು ಕಂಪನಿಗಳಿಗೆ ೩೪.೧೮ ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಜೀವಾ ಅವರಿಗೆ ಸೇರಿದ್ದು ಎನ್ನಲಾದ ಅನ್ನಿಕಾ ಎಂಟರ್ ಪ್ರೈಸ್ ಕಂಪನಿಗೆ ೭.೧೬ ಕೋಟಿ ರೂ. ಹಾಗೂ ಅವರ ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್ ಕಂಪನಿಗೆ ೩.೭೯ ಕೋಟಿ ರೂ. ಸೇರಿ ಒಟ್ಟು ೧೦.೯ ಕೋಟಿ ರೂ., ನಿಗಮದ ಸಿಬ್ಬಂದಿ ಯಶಸ್ವಿನಿ ಅವರಿಗೆ ಸೇರಿದ್ದ ಎನ್ನಲಾದ ಡ್ರೀಮ್ ಎಂಟರ್ ಪ್ರೈಸಸ್ ಕಂಪನಿಗೆ ೮ ಕೋಟಿ ೭೮ ಲಕ್ಷ ರೂ. ಯಶಸ್ವಿನಿ ಸೋದರ ಕಾರ್ತೀಕ್ ಗೌಡ ಹೆಸರಿನಲ್ಲಿನ ಆದಿತ್ಯ ಎಂಟರ್ ಪ್ರೈಸಸ್ ಕಂಪನಿಗೆ ೪ ಕೋಟಿ ೭೬ ಲಕ್ಷ ಜಮೆಯಾಗಿದೆ.

Leave a Reply

Your email address will not be published. Required fields are marked *

error: Content is protected !!