ಉದಯವಾಹಿನಿ, ನವದೆಹಲಿ: ನನಗೆ ಪಕ್ಷದ ಕೇಂದ್ರ ಶಿಸ್ತು ಸಮಿತಿಯಿಂದ ಅಧಿಕೃತವಾಗಿ ಯಾವುದೇ ನೋಟಿಸ್ ಬಂದಿಲ್ಲ. ಇದರ ಬಗ್ಗೆ ಅನುಮಾನವಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಕಲಿ ಪತ್ರವನ್ನು ಸೃಷ್ಟಿಸಿರಬಹುದೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಂಶಯ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಅಧಿಕೃತವಾಗಿ ಶೋಕಾಸ್ ನೋಟಿಸ್ ಬರುವವರೆಗೂ ಯಾವುದೇ ಪ್ರತಿಕ್ರಿಯೆ ನೀಡಬಾರದೆಂದು ಸುಮನಿದ್ದೇನೆ. ನನಗೆ ಈಗಲೂ ಈ ಪತ್ರದ ನೈಜ್ಯತೆ ಬಗ್ಗೆ ಸಂಶಯವಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ವಿಜಯೇಂದ್ರ ಅವರ ತಂದೆಯ ಸಹಿಯುಳ್ಳ ಪತ್ರಕ್ಕೆ ಸಹಿ ಹಾಕಿದ್ದಾರೆಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಅವರೇ ಹೇಳಿದ್ದಾರೆ. ಹಾಗಾಗಿ ನನಗೆ ಪತ್ರದ ಬಗ್ಗೆಯೇ ಸಂಶಯವಿದೆ. ಒಂದು ವೇಳೆ ಅಧಿಕೃತ ಶೋಕಾಸ್ ನೋಟಿಸ್ ನೀಡಿದರೆ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.

ನಾನು ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದಿರುವುದಕ್ಕೆ ಕೆಲವರು ನನ್ನ ವಿರುದ್ಧ ಷಡ್ಯಂತರ ನಡೆಸುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಇದು ವಿಜಯೇಂದ್ರ ಸೃಷ್ಟಿಸಿರುವ ನಕಲಿ ಪತ್ರ. ಅಷ್ಟಕ್ಕೂ ನೋಟಿಸ್ ಬಂದರೆ ಉತ್ತರ ಕೊಡಲು ಸಮರ್ಥನಿದ್ದೇನೆ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಯತ್ನಾಳ್ ಅನೂನ್ಯವಾಗಿದ್ದಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಕೆಂಡ ಕಾರಿದ ಅವರು, ನಾನು ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮನೆಗೆ ಹೋಗಿ ಪತ್ರಕ್ಕೆ ಸಹಿ ಹಾಕಿರುವುದಕ್ಕೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಎಸೆದರು.

 

Leave a Reply

Your email address will not be published. Required fields are marked *

error: Content is protected !!