ಉದಯವಾಹಿನಿ,ಚಾಮರಾಜನಗರ: ತಾಲೂಕಿನ ಭೋಗಾಪುರ -ಮೂಕಳ್ಳಿ ಗ್ರಾಮದ ಬಳಿ ಜೆಟ್ ವಿಮಾನ ಪತನವಾಗಿದೆ. ಪ್ಯಾರಾಚೂಟ್ ಬಳಸಿ ಇಬ್ಬರು ಪೈಲಟ್​ಗಳು ವಿಮಾನದಿಂದ ಹೊರ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.ಗ್ರಾಮದ ಮುಖ್ಯರಸ್ತೆಯ ಸಮೀಪದ ಖಾಲಿ ಜಮೀನಿನಲ್ಲಿ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಲಘು ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ವಿಮಾನ ಸುಟ್ಟು ಕರಕಲಾಗಿದೆ.ವಿಮಾನದಲ್ಲಿ ಇದ್ದ ಇಬ್ಬರು ಪೈಲಟ್​​ಗಳು ಪ್ಯಾರಾಚೂಟ್ ಮೂಲಕ ಪಾರಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ಲಘು ವಿಮಾನ ಅಪಘಾತವನ್ನು ಹಲವರು ಪ್ರತ್ಯಕ್ಷವಾಗಿ ನೋಡಿದ್ದು, ಕ್ಷಣಮಾತ್ರದಲ್ಲಿ ವಿಮಾನ ಮೇಲಿನಿಂದ ಕೆಳಕ್ಕೆ ಬಿದ್ದು ಸ್ವಲ್ಪ ಸಮಯದಲ್ಲೇ ಬೆಂಕಿ ಹೊತ್ತಿಕೊಂಡಿತು ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಕುದೇರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ತಾಜುದ್ದೀನ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದ್ರೆ ವಿಮಾನ ಎಲ್ಲಿಯದ್ದು? ಪ್ಯಾರಾಚೂಟ್​ನಿಂದ ಬಳಸಿ ಹೊರ ಬಂದಿರುವ ಪೈಲಟ್​ಗಳು ಯಾರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

error: Content is protected !!