ಉದಯವಾಹಿನಿ, ಬೆಂಗಳೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ರಾಜ್ ಶಿವು ಬಂಧಿತ ಆರೋಪಿಯಾಗಿದ್ದಾನೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ಕಳೆದ ನ.೩೦ ರಂದು ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ.ಶಿವಕುಮಾರ್ ಸ್ವಾಮೀಜಿ ಮೂರ್ತಿ ಒಡೆಯಲು ಕನಸನಲ್ಲಿ ಬಂದು ಏಸು ಹೇಳಿದ್ದರಂತೆ. ಏಸು ಹೇಳಿದ್ದಕ್ಕೆ ಶಿವಕುಮಾರ್ ಸ್ವಾಮೀಜಿ ಮೂರ್ತಿ ವಿರೂಪಗೊಳಿಸಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

೭ ವರ್ಷಗಳ ಹಿಂದೆ ರಾಜ್ ಶಿವು ಹಿಂದೂ ಧರ್ಮ ತೊರೆದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ. ಹಿಂದೂ ದೇವತೆಗಳು, ಹಿಂದೂ ಧರ್ಮದ ಸಂತರು, ಸನ್ಯಾಸಿಗಳ ಮೇಲೆ ದ್ವೇಷ ಸಾಧಿಸುತ್ತಿದ್ದ. ಬ್ಯಾಡರಹಳ್ಳಿ ವ್ಯಾಪ್ತಿಯಲ್ಲಿ ವಾಸವಿದ್ದ ಆತ ಕ್ರಿಶ್ಚಿಯನ್‌ಗೆ ಮತಾಂತರವಾದ ಮೇಲೆ ಧರ್ಮಾಂದನಂತೆ ವರ್ತಿಸುತ್ತಿದ್ದು, ಶಿವಕುಮಾರ ಸ್ವಾಮೀಜಿ ಮೂರ್ತಿಯನ್ನು ಒಡೆಯಲು ಸಂಚು ಮಾಡಿಕೊಂಡಿದ್ದ.
ನ.೩೦ರಂದು ರಾತ್ರಿ ಸುತ್ತಿಗೆ ಸಮೇತ ಆರೋಪಿ ಬಂದು, ರಾತ್ರಿ ಯಾರು ಇಲ್ಲದ ವೇಳೆ ಪುತ್ಥಳಿ ವಿರೂಪಗೊಳಿಸಿ ಪರಾರಿಯಾಗಿದ್ದನು.ಕ್ರೈಸ್ತ ಧರ್ಮದ ಪ್ರಚಾರ ಮಾಡಲು ಭಿತ್ತಿಪತ್ರ ಹಂಚುತ್ತಿದ್ದ. ಪತ್ರದಲ್ಲಿನ ಕೋಡ್ ಸ್ಕ್ಯಾನ್ ಮಾಡಿದ್ರೆ ಬೈಬಲ್ ಸಿಗುವಂತೆ ಭಿತ್ತಿಪತ್ರ ಹಂಚುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!