ಉದಯವಾಹಿನಿ, ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತ ಐದು ಗ್ಯಾರಂಟಿಗಳನ್ನು ಏಕಕಾಲಕ್ಕೆ ಜಾರಿಯ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಈ ಹಿಂದೆ ಮಾತನಾಡಿದ್ದಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್, ಮಾಜಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವೆಗೆ ಟಾಂಗ್ ನೀಡಿ ಕಾಂಗ್ರೆಸ್ ಇಂದು ಯೋಜನೆ ಜಾರಿಯ ಘೋಷಣೆ ಬಳಿಕ ಟ್ವಿಟ್ ಮಾಡಿದೆ.ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್ ನಳೀನ್ ಕುಮಾರ್ ಕಟೀಲ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ. ಬಸವರಾಜ ಬೊಮ್ಮಾಯಿ ಅವರೆ, ನಿಮ್ಮ ಮನೆಗೂ ಫ್ರೀ! ಶೋಭಾ ಕಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ. ಸಿಟಿ ರವಿ ಅವರೇ ನಿಮ್ಮ ಮನೆಯವರಿಗೂ ರೂ.2000 ಫ್ರೀ! ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ ಎಂಬುದಾಗಿ ಹೇಳಿದೆ.ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!