ಉದಯವಾಹಿನಿ,ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್ ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ಸಿಂಹ ನಾಯಕ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂ.ಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸ್ ಆಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ನುಡಿದರು. ಶಾಲಾ ಕಾಲೇಜುಗಳಿಗೆ ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗು ಸಾರ್ವಜನಿಕರಿಗೆ `ಡಿಜಿಟಲ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಾ ಕೈಗೊಳ್ಳಲಾಗುತ್ತಿದೆ. ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ‘ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!