ಉದಯವಾಹಿನಿ, ಬೆಳಗಾವಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವ ಘಟನೆ ಖಂಡಿಸಿ ಬಿಜೆಪಿ ಮುಖಂಡರು ಬೆಳಗಾವಿಯ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಪಕ್ಷಗಳ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ, ಮುಖಂಡರಾದ ಅಶ್ವತ್್ಥ ನಾರಾಯಣ್, ಸಿ.ಸಿ.ಪಾಟೀಲ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸುನಿಲ್ಕುಮಾರ್, ಎಸ್.ಆರ್.ವಿಶ್ವನಾಥ್, ಶ್ರೀವತ್ಸ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಬಸವರಾಜ ಬೊಮಾಯಿ ಮಾತನಾಡಿ, ಸ್ವಾಮೀಜಿ ಅವರ ನೇತೃತ್ವದಲ್ಲಿ ಶಾಂತಿಯುತ ಹೋರಾಟ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಲಾಠಿಚಾರ್ಜ್ ಮಾಡಲಾಗಿದೆ. ನಾವು ಯಾವುದೇ ರೀತಿಯ ಮುತ್ತಿಗೆ ಪ್ರಯತ್ನ ಮಾಡಿಲ್ಲ. ಮನವಿ ನೀಡಲು ಬರುತ್ತಿದ್ದೆವು. ಆದರೆ, ಲಾಠಿಚಾರ್ಜ್ ಮಾಡಿ ಪ್ರತಿಭಟನೆ ಹತ್ತಿಕ್ಕುವ ಯತ್ನ ಮಾಡಿದ್ದಾರೆ. ಪಂಚಮಸಾಲಿಗೆ ಮೀಸಲಾತಿ ನೀಡದಂತೆ ಹಿಂದುಳಿದ ವರ್ಗಗಳ ಒಕ್ಕೂಟ ಸಿಎಂಗೆ ಮನವಿ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಒಕ್ಕೂಟ ಅಲ್ಲ, ಸಿಎಂ ಕೃಪಾಪೋಷಿತ ನಾಟಕ ಮಂಡಳಿ ಎಂದು ಹೇಳಿದರು.
