ಉದಯವಾಹಿನಿ, ಚನ್ನರಾಯಪಟ್ಟಣ: ಹನುಮ ಜಯಂತಿ ಅಂಗವಾಗಿ ಪಟ್ಟಣದಲ್ಲಿರುವ 40 ಅಡಿ ಎತ್ತರದ ಆಂಜನೇಯಸ್ವಾಮಿಗೆ ಬೃಹತ್ ಹೂವಿನ ಹಾರ ಹಾಕಿ ಪೂಜೆ ಸಲ್ಲಿಸಲಾಯಿತು. ಗುರುವಾರ ಬೆಳಿಗ್ಗೆ 6ಕ್ಕೆ ಸುಪ್ರಭಾತ, ಪಂಚಾಮೃತ ಅಭಿಷೇಕ, ಬೆಣ್ಣೆ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ರಾಮತಾರಕ ಹೋಮ ಮಾಡಿ ಪೂರ್ಣಾಹುತಿ ನೆರವೇರಿಸಲಾಯಿತು. ದೇವರಿಗೆ ಬೆಣ್ಣೆ ಅಲಂಕಾರ ಮತ್ತು ವೀಳೆದೆಲೆ ಅಲಂಕಾರ ರಾಮತಾರಕ ಹೋಮ ಮಾಡಿ ಪೂರ್ಣಾಹುತಿ ನೆರವೇರಿಸಲಾಯಿತು. ಮಾಡಲಾಗಿತ್ತು. ದೇವಸ್ಥಾನದಲ್ಲಿ ಮಾಡಿದ ದ್ರಾಕ್ಷಿ ತೋಟದ ಅಲಂಕಾರ ಭಕ್ತರ ಗಮನ ಸೆಳೆಯಿತು. ಭಕ್ತರು ಹಣ್ಣು, ಕಾಯಿ ಅರ್ಪಿಸಿ ಪೂಜೆ ಮಾಡಿದರು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ಎಂ.ಎಸ್. ವಿಶ್ವನಾಥ ದೀಕ್ಷಿತ್ ಪೂಜಾ ಕೈಂಕರ್ಯ ನಡೆಸಿಕೊಟ್ಟರು.

Leave a Reply

Your email address will not be published. Required fields are marked *

error: Content is protected !!