ಉದಯವಾಹಿನಿ, ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಭಿಕ್ಷುಕರ ಕಾಟವನ್ನು ಆರಂಭಿಕ ಹಂತದಲ್ಲೇ ತಡೆಯಲು ಭದ್ರತಾ ಸಿಬ್ಬಂದಿಯಿಂದ ಮೆಟ್ರೋ ರೈಲಿನ ಒಳಗೆ ಪರೀಶೀಲನೆಗೆ ಬಿಎಂಆರ್‌ಸಿಎಲ್ ಮುಂದಾಗಿದೆ.  ಕಳೆದ ನ.೧೪ ಮಧ್ಯಾಹ್ನ ೧೨ರ ಸುಮಾರಿಗೆ ಕೆಂಗೇರಿ ವೈಟ್ ಫೀಲ್ಡ್ ಮಾರ್ಗದ ಮೆಟ್ರೋ ರೈಲಿನ ಒಳಗೆ ವಿಕಲಚೇತನ ವ್ಯಕ್ತಿ ಭಿಕ್ಷಾಟನೆ ನಡೆಸಿದ್ದ.
ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ ಆಲರ್ಟ್ ಆಗಿದ್ದ ಬಿಎಂಆರ್‌ಸಿಎಲ್ ಅಧಿಕಾರಿಗಳು ಭದ್ರತಾ ಸಿಬ್ಬಂದಿಗೆ ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿಯ ಪತ್ತೆ ಮಾಡುವಂತೆ ಸೂಚಿಸಿದ್ದರು. ಅಲ್ಲದೇ ಈ ಮಾರ್ಗದ ರೈಲಿನಲ್ಲಿ ಸಂಚಾರ ಮಾಡುವಂತೆ ಭದ್ರತಾ ಸಿಬ್ಬಂದಿಗೆ ಸೂಚಿಸಿದ್ದಾರೆ.
ಮೆಟ್ರೋದಲ್ಲಿ ಭಿಕ್ಷಾಟನೆ ಮಾಡೋದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದೆ. ಅದರಲ್ಲೂ ಮೆಟ್ರೋದಲ್ಲಿ ಭಿಕ್ಷಾಟನೆ ಮಾಡೋದಕ್ಕೆ ಅವಕಾಶವೇ ಇಲ್ಲ. ಅತಂಹ ಜಾಗದಲ್ಲಿ ಭಿಕ್ಷಾಟನೆ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ, ಆತನನ್ನ ಪೊಲೀಸರಿಗೆ ಒಪ್ಪಿಸಲು ಮೆಟ್ರೋ ಅಧಿಕಾರಿಗಳು ಮುಂದಾಗಿದ್ದಾರೆ.  ಆರಂಭಿಕ ಹಂತದಲ್ಲೇ ಇದಕ್ಕೆ ಕಡಿವಾಣ ಹಾಕದೇ ಇದ್ದರೆ ನಮ್ಮ ಮೆಟ್ರೋ ರೈಲಿನಲ್ಲೂ ಭಿಕ್ಷುಕರ ಸಂಖ್ಯೆ ಹೆಚ್ಚಾಗಿ ಪ್ರಯಾಣಿಕರಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಬಿಎಂಆರ್‌ಸಿಎಲ್ ಕ್ರಮಕ್ಕೆ ಮುಂದಾಗಿದೆ.

Leave a Reply

Your email address will not be published. Required fields are marked *

error: Content is protected !!