ಉದಯವಾಹಿನಿ, ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ಕಂಡ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. *ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ. *ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ.
