ಉದಯವಾಹಿನಿ, ಮಂಡ್ಯ: ‘87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದನ್ನು ವಿರೋಧಿಸಿ ‘ಮನೆಗೊಂದು ಕೋಳಿ ಮತ್ತು ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ, ಸಮ್ಮೇಳನದಲ್ಲಿ ಮಾಂಸಪ್ರಿಯರಿಗೆ ಅಡುಗೆ ಮಾಡಿಸುತ್ತೇವೆ ಎಂದು ಸಾಹಿತಿ ರಾಜೇಂದ್ರ ಪ್ರಸಾದ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಪ್ರಾತಿನಿಧ್ಯವಿರುಬೇಕೆಂಬುದು ನಮ್ಮ ಉದ್ದೇಶ. ತಂಬಾಕು, ಮದ್ಯಪಾನ ಹಾಗೂ ಮಾಂಸಾಹಾರ ನಿಷೇಧಿಸಲಾಗಿದೆ ಎಂಬ ನಿಬಂಧನೆಯನ್ನು ಖಂಡಿಸಿಯೇ ಇದು ಪ್ರಾರಂಭವಾಗಿದ್ದು ಎಂಬುದನ್ನು ಅರಿತುಕೊಳ್ಳಬೇಕು’ ಎಂದರು.
‘ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ನಿಷೇಧವಿಲ್ಲ. ಆದರೂ ಅದನ್ನು ಕೀಳಾಗಿ ಕಾಣುತ್ತಿರುವುದನ್ನು ಹೋಗಲಾಡಿಸುವ ಹಾಗೂ ಆಹಾರದಲ್ಲಿ ಸಮಾನತೆ ತರುವ ಪ್ರಯತ್ನ ನಮ್ಮದು. ಸಾರ್ವಜನಿಕರ ಹಣವನ್ನು ಸಮ್ಮೇಳನದಲ್ಲಿ ಬಳಸುತ್ತಿದ್ದು, ಒಂದು ಮೊಟ್ಟೆ ಹಾಗೂ ಒಂದು ತುಂಡು ಮಾಂಸ ನೀಡಲು ಸಮಸ್ಯೆ ಏನಿದೆ’ ಎಂದು ಪ್ರಶ್ನಿಸಿದರು.
