ಉದಯವಾಹಿನಿ, ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಬೆಂಗಳೂರಿಗೆ ಆಗಮಿಸಿದ್ದು, ಸರಣಿ ಸಭೆಗಳ ಮೂಲಕ ಕಾಂಗ್ರೆಸ್ ಪಕ್ಷದಲ್ಲಿನ ಗೊಂದಲಗಳನ್ನು ಬಗೆಹರಿಸಲು ಪ್ರಯತ್ನಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಪಕ್ಷದ ಪದಾಧಿಕಾರಿಗಳು, ಸಚಿವರು, ಪ್ರಮುಖ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.
ಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಹಲವಾರು ಮಂದಿ ಹೇಳಿಕೆಗಳನ್ನು ನೀಡುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ. ಅದೇ ರೀತಿ ಇನ್ನೂ ಕೆಲವು ನಾಯಕರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಸಾಕಷ್ಟು ಗೊಂದಲಗಳನ್ನು ಮೂಡಿಸಿದ್ದಾರೆ.
ಜಾತಿವಾರು ಡಿನ್ನರ್ ಸಭೆಗಳು ನಡೆದಿವೆ. ಜಾತಿಜನಗಣತಿ ಸಮೀಕ್ಷಾ ವರದಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಪಕ್ಷದಲ್ಲಿ ಗೊಂದಲದ ವಾತಾವರಣವಿದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡುವ ಸಲುವಾಗಿ ಸುರ್ಜೇವಾಲ ಸಭೆ ಮಹತ್ವದ ಬೆಳವಣಿಗೆಯಾಗಿದೆ.
ಅಧಿಕಾರ ಹಂಚಿಕೆ ಸೇರಿದಂತೆ ಯಾವುದೇ ವಿಚಾರಗಳಿದ್ದರೂ ಅದು ಕಾಂಗ್ರೆಸ್ನ ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುತ್ತದೆ. ಅದನ್ನು ಹೊರತುಪಡಿಸಿ ಬೇರೆ ಯಾರೂ ಹೇಳಿಕೆಗಳನ್ನು ನೀಡಿ ಗೊಂದಲಗಳನ್ನು ಮೂಡಿಸಬಾರದು ಎಂದು ರಣದೀಪ್ ಸಿಂಗ್ ಸುರ್ಜೇವಾಲ ಸಭೆಯಲ್ಲಿ ಕಟ್ಟಪ್ಪಣೆ ಮಾಡಿದ್ದಾರೆ.
ಕೆಲವು ಸಚಿವರು ಈ ವೇಳೆ ತಮದೇ ಆದ ದೂರುಗಳನ್ನು ಹೇಳಲು ಮುಂದಾಗಿದ್ದಾರೆ. ಆದರೆ ಅದಕ್ಕೆ ಮಾನ್ಯತೆ ನೀಡದ ಸುರ್ಜೇವಾಲ ಅವರು ಸಂಪುಟದಲ್ಲಿ ಅವಕಾಶ ಕಲ್ಪಿಸಿದ್ದಾರೆ. ಇಲಾಖೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಒಂದು ವೇಳೆ ದೂರುಗಳೇ ಪ್ರಮುಖವಾಗಿದ್ದರೆ ಸಂಪುಟದಿಂದ ಹೊರಗಿದ್ದು, ನಿಮ ಹೋರಾಟ ಮುಂದುವರೆಸಿ ಎಂದು ಸೂಚಿಸಿರುವುದಾಗಿ ತಿಳಿದುಬಂದಿದೆ.
