ಉದಯವಾಹಿನಿ,ಸೂರ್ಯ ಪೇಟೆ : ತನ್ನ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಆತನ ಇಬ್ಬರು ಪತ್ನಿಯರೇ ಸೇರಿ ಕೊಲೆಗೈದ ಘಟನೆ ತೆಲಂಗಾಣದ ಸೂರ್ಯಪೇಟೆಯಲ್ಲಿ ನಡೆದಿದೆ.
ಜಿಲ್ಲೆಯ ಚಿವ್ವೆನ್ಲಾ ತಾಲ್ಲೂಕಿನ ಹಳ್ಳಿಯಲ್ಲಿ ಸೋಮವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 43 ವರ್ಷ, ವೃತ್ತಿಯಲ್ಲಿ ಚಾಲಕ ಎಂದು ಗುರುತಿಸಲಾಗಿದೆ. ಹಲವು ವರ್ಷಗಳ ಹಿಂದೆ ನಲ್ಗೊಂಡ ಜಿಲ್ಲೆಯ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಗಂಡು ಮಗುವಿನ ಮೋಹದಲ್ಲಿ ತನ್ನ ಪತ್ನಿಯ ತಂಗಿಯನ್ನೂ ಮದುವೆಯಾಗಿದ್ದಾನೆ. ಆಕೆಗೆ ಗಂಡು ಮಗು ಜನಿಸಿದ್ದು, ಎಲ್ಲರೂ ಒಂದೇ ಕುಟುಂಬದಲ್ಲಿ ಒಟ್ಟಿಗೆ ನೆಲೆಸಿದ್ದರು.
ಕೆಲವು ತಿಂಗಳ ಹಿಂದೆ ತನ್ನ ಮೊದಲ ಪತ್ನಿಯ ಕಿರಿ ಮಗಳು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. ಹಿರಿ ಮಗಳು ಹೈದರಾಬಾದ್ನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾಳೆ. ಕಿರಿ ಮಗಳ ಸಾವಿನ ನಂತರ ಆರೋಪಿ ಮದ್ಯದ ಚಟಕ್ಕೆ ದಾಸನಾಗಿದ್ದ. ಅಂದಿನಿಂದ ಆತನ ನಡವಳಿಕೆ ಬದಲಾಗುತ್ತಾ ಸಾಗಿದೆ. ಇಬ್ಬರು ಪತ್ನಿಯರಿಗೆ ಮಾನಸಿಕ, ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದ. ಇದರಿಂದ ಪತ್ನಿಯರು ಸಾಕಷ್ಟು ಮನನೊಂದಿದ್ದರು. ಹಿರಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾನೆ. ದಿನ ಕಳೆದಂತೆ ಆಕೆಗೆ ಲೈಂಗಿಕ ಕಿರುಕುಳ ನೀಡಲೂ ಶುರು ಮಾಡಿದ್ದಾನೆ.

 

Leave a Reply

Your email address will not be published. Required fields are marked *

error: Content is protected !!