ಉದಯವಾಹಿನಿ, ರಾಣೆಬೆನ್ನೂರು: ‘ರಾಜ್ಯದ ಮುಖ್ಯಮಂತ್ರಿ ಖುರ್ಚಿಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಕಿತ್ತಾಟ ಶುರುವಾಗಿದ್ದು, ಇದರ ಭಾಗವಾಗಿ ಔತಣಕೂಟಗಳು ನಡೆಯುತ್ತಿವೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಹಾಗೂ ಇತ್ತೀಚೆಗೆ ನಿಧನರಾದ ಜಿಲ್ಲಾ ಕಾರ್ಯದರ್ಶಿ ದೀಪಕ ಹರಪನಹಳ್ಳಿ ಅವರ ಸಂತಾಪ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಬಹಳ ದಿನ ಉಳಿಯಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಲ್ಪಸಂಖ್ಯಾತರ ತುಷ್ಟಿಕರಣ ನಡೆಯುತ್ತಿದೆ. ದುಷ್ಕ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟ ಮುಂದುವರಿಯಲಿದೆ ಎಂದರು.
‘ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಇತ್ತೀಚೆಗೆ ಆಕಳ ಕೆಚ್ಚಲು ಕೊಯ್ದಿರುವ ಘಟನೆ ಅಮಾನವೀಯವಾದದ್ದು. ರಾಜ್ಯದ ಮುಖ್ಯಮಂತ್ರಿಗೆ ಈ ಕುರಿತು ಯಾವುದೇ ನೋವಾಗಿಲ್ಲ. ಇಂದಿನ ಸರ್ಕಾರದ ಆಡಳಿತದಿಂದ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ವೇತನ ಕೊಡಲು ಸರ್ಕಾರದಲ್ಲಿ ಹಣವಿಲ್ಲ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಕಾಂಗ್ರೇಸ್ ಪಕ್ಷದಿಂದಲೇ ಸಂಚು ನಡೆಯುತ್ತಿದೆ’ ಎಂದರು.
ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ಜಿಲ್ಲಾ ಘಕದ
ಅಧ್ಯಕ್ಷ ಅರುಣಕುಮಾರ ಪೂಜಾರ ಇದ್ದರು.

Leave a Reply

Your email address will not be published. Required fields are marked *

error: Content is protected !!