ಉದಯವಾಹಿನಿ, ಬಿಜಾಪುರ: ಯಾವುದೇ ಕಾರಣಕ್ಕೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಗುಡುಗಿರುವ ಭಿನ್ನಮತೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಯಡಿಯೂರಪ್ಪನವರನ್ನು ಜೈಲಿಗೆ ಕಳುಹಿಸಿದವರನ್ನು ನಾವು ಒಪ್ಪಿಕೊಳ್ಳಬೇಕೇ ಎಂದು ಪ್ರಶ್ನಿಸಿದ್ದಾರೆ.
ಪಕ್ಷದ ವಿಚಾರ ಬಂದಾಗ ನಾನು ಯಾವಾಗಲೂ ಪಕ್ಷ ನಿಷ್ಠೆಯಾಗಿ ರುತ್ತೇನೆ. ಆದರೆ ನಾಯಕತ್ವ ವಿಚಾರ ಬಂದಾಗ ವಿಜಯೇಂದ್ರ ಅವರನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಮೊದಲು ಅವರು ತಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬೇರೆಯವರ ಬಗ್ಗೆ ಮಾತನಾಡಲಿ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ವಿಜಯೇಂದ್ರ ಮೊದಲು ರಾಜ್ಯಾಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕು. ಯಾವುದೇ ಕಾರಣಕ್ಕೂ ಅವರ ನಾಯಕತ್ವವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ನಮ ನಿಲುವನ್ನು ನಾವು ಈಗಾಗಲೇ ವರಿಷ್ಠರ ಬಳಿ ಸ್ಪಷ್ಟಪಡಿಸಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!