ಉದಯವಾಹಿನಿ: ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟಮಕ ಬಳಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸ್ ಬಡಾವಣೆಯಲ್ಲಿ ರೂ.೯೮ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬಡಾವಣೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ನೂತನವಾಗಿ ನಿರ್ಮಿಸಿದ ಪಂಪ್ ಹೌಸ್ ಗೆ ಚಾಲನೆ ನೀಡಿದರು.
ಶಾಲೆ ಅಂಗನವಾಡಿ ಕೇಂದ್ರ ಉದ್ಘಾಟನೆ ತಾಲ್ಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ಗಂಗಮ್ಮನಪಾಳ್ಯ ನೂತನ ಅಂಗನವಾಡಿ ಕೇಂದ್ರ ಹಾಗೂ ಕಿರಿಯ ಪ್ರಾಥಮಿಕ ಶಾಲೆಯನ್ನು ಸಚಿವರು ಉದ್ಘಾಟಿಸಿದರು.ಕೋಲಾರ ಕ್ಷೇತ್ರದ ಶಾಸಕರಾದ ಕೂತ್ತೂರು ಮಂಜುನಾಥ, ಕೋಲಾರ ಸಂಸದರಾದ ಎಂ.ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್, ಕೆ.ಗೋವಿಂದ ರಾಜ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಹನೀಫ್, ರಾಜ್ಯ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ ವೈ.ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಎಂ.ಆರ್.ರವೀ ಸೇರಿದಂತೆ ಇತರರು ಉಪಸ್ಥಿತರಿದ್ದರು.
