ಉದಯವಾಹಿನಿ, ಬೆಂಗಳೂರು: ಬಿಜೆಪಿಯಲ್ಲಿ ಜಿಲ್ಲಾಧ್ಯಕ್ಷರುಗಳ ಘೋಷಣೆಯಾಗಿದ್ದು ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾಗಿ ಎಸ್.ಹರೀಶ್ ರವರನ್ನು ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾಗಿ ಸಪ್ತಗಿರಿಗೌಡ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರಾಗಿ ಸಿಕೆ. ರಾಮಮೂರ್ತಿರವರುಗಳ ಹೆಸರನ್ನು ಘೋಷಿಸಲಾಗಿದೆ.
ಬೆಂಗಳೂರು ಉತ್ತರ ಜಿಲ್ಲೆ ಚುನಾವಣಾಧಿಕಾರಿಗಳಾದ ರವಿಸುಬ್ರಹ್ಮಣ್ಯ ರವರು, ಬೆಂಗಳೂರು ಕೇಂದ್ರ ಜಿಲ್ಲಾ ಚುನಾವಣಾಧಿಕಾರಿಗಳಾದ ಹೆಚ್.ಎಸ್.ಗೋಪಿನಾಥ್ ರವರು, ವಿಧಾನಪರಿಷತ್ ಸದಸ್ಯರು ಹಾಗೂ ಮುಖ್ಯ ಸಚೇತಕರಾದ ಎನ್.ರವಿಕುಮಾರ್ ರವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೀವ್ ರವರು, ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹರವರು, ಮಾಜಿ ಜಿಲ್ಲಾಧ್ಯಕ್ಷರಾದ ಬಿ.ನಾರಾಯಣ್ ರವರು, ಬೆಂಗಳೂರು ಮಹಾನಗರದ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!