ಉದಯವಾಹಿನಿ, ಬೆಂಗಳೂರು: ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನದ ಮುಂದುವರೆದ ಉಪವೇಶನವು ಜುಲೈ 3 ಸೋಮವಾರದಂದು ಅಪರಾಹ್ನ 12 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದ್ದು, ಅಂದು ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
