ಉದಯವಾಹಿನಿ, ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿರುವ ಬೆನ್ನಲ್ಲೇ, ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.

ವಿಜಯೇಂದ್ರ ಅವರು ದೆಹಲಿಗೆ ತೆರಳಿದ್ದರು.ಒಂದೆರಡು ದಿನಗಳ ಕಾಲ ಅಲ್ಲಿಯೇ ಇದ್ದು, ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ. ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರ ಮತ್ತು ಮಣಿಪುರದಲ್ಲಿ ಸಿಎಂ ಎನ್. ಬಿರೇನ್ ಸಿಂಗ್ ತಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯನಿರತರಾಗಿದ್ದು, ಬಿಡುವಾದ ಬಳಿಕ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರವೇ ವಿಜಯೇಂಧ್ರ ವಾಪಸ್ಸಾಗಲಿದ್ದಾರೆಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ವಿಚಾರವಾಗಿ ವರಿಷ್ಠರು ನಿರ್ಧಾರ ಕೈಗೊಳ್ಳಲು ಮುಂದಾಗಿರುವ ಹಿನ್ನೆಲೆಯಲ್ಲಿ ಶಾ ಅವರೊಂದಿಗಿನ ವಿಜಯೇಂದ್ರ ಅವರ ಭೇಟಿ ನಿರ್ಣಾಯಕವಾಗಿದೆ.ಈ ನಡುವೆ ಪಕ್ಷದ ಹೈಕಮಾಂಡ್ ನಾಯಕರು ತಮಗೆ ಅವಕಾಶ ನೀಡುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಂಡಿರುವ ಮಾಜಿ ಸಚಿವ ಬಿ. ಶ್ರೀರಾಮುಲು ಅವರು, ಪ್ರಯಾಗ್ರಾಜ್ನಲ್ಲಿ ಪವಿತ್ರ ಸ್ನಾನ ಮಾಡಿ ತವರಿಗೆ ವಾಪಸ್ಸಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!