ಉದಯವಾಹಿನಿ, ವಿಜಯಪುರ: ಜಾತಿ ಗಣತಿ ವರದಿ ವಿಚಾರದಲ್ಲಿ ಲಿಂಗಾಯಿತ ಸಮುದಾಯದ ಎಲ್ಲಾ ಏಳು ಕ್ಯಾಬಿನೇಟ್ ಸಚಿವರು ಒಗ್ಗಟ್ಟಿನಿಂದ ಇದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಲಿಂಗಾಯಿತ ಸಮುದಾಯದ ಸಚಿವರಾದ ಈಶ್ವರ್ ಖಂಡ್ರೆ, ಶರಣ ಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ ನಂತರ ಏಪ್ರಿಲ್ 17 ರಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದಾಗಿ ತಿಳಿಸಿದರು.

ಮತ್ತೊಮ್ಮೆ ಸಿಎಂ ಭೇಟಿಯಾಗಿ ಜಾತಿ ಗಣತಿಗೆ ಸಂಬಂಧಿಸಿದ ನಮ್ಮ ಬೇಡಿಕೆಗಳನ್ನು ಅವರ ಮುಂದಿಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ನಾವು ಒಗ್ಗಟ್ಟಾಗಿದ್ದೇವೆ” ಎಂದು ಅವರು ಪ್ರತಿಪಾದಿಸಿದರು.
ಇದೊಂದು ಸಣ್ಣ ಭಿನ್ನಾಭಿಪ್ರಾಯ: ಶಿವಾನಂದ ಪಾಟೀಲ್ ಮತ್ತು ಈಶ್ವರ್ ಖಂಡ್ರೆ ಜೊತೆಗೆ ವಾಗ್ವಾದ ವರದಿ ಕುರಿತು ಪ್ರತಿಕ್ರಿಯಿಸಿದ ಎಂಬಿ ಪಾಟೀಲ್, ನಾವೆಲ್ಲರೂ ವಿಶೇಷ ಕ್ಯಾಬಿನೆಟ್ ಸಭೆಗೂ ಮುನ್ನಾ ಭೇಟಿಯಾಗಿ ಜನಗಣತಿ ವರದಿಯ ಬಗ್ಗೆ ಚರ್ಚಿಸಿ, ಕಳವಳ ವ್ಯಕ್ತಪಡಿಸಿದ್ದೇವೆ ಮತ್ತು ಮುಂದಿನ ದಾರಿಯ ಬಗ್ಗೆಯೂ ಮಾತನಾಡಿದ್ದೇವೆ. ನಾವು ಒಗ್ಗಟ್ಟಾಗಿದ್ದೇವೆ. ಚರ್ಚೆಯನ್ನು ಯಾರೊ ಬಹಿರಂಗಪಡಿಸಿದ್ದಾರೆ ಎಂದರು.

ಇದು ಕೇವಲ ಸಣ್ಣ ಭಿನ್ನಾಭಿಪ್ರಾಯ. ಈ ಹಿಂದೆ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಬಗ್ಗೆ ಪ್ರಸ್ತಾಪಿಸಿದಾಗ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿತ್ತು ಎಂದು ಶಿವಾನಂದ ಪಾಟೀಲ್ ಹೇಳಿದರು. ಆದರೆ, ಕೂಡಲೇ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗಾಗಿಲ್ಲ. ಹಾಗಿದ್ದಿದ್ದರೆ ಇಷ್ಟು ದೊಡ್ಡ ಅಂತರದಲ್ಲಿ ನಾನು ಹೇಗೆ ಗೆಲ್ಲುತ್ತಿದ್ದೆ ಎಂದು ಸಿಎಂ ಹೇಳಿದರು. ನಾನು 30,000 ಮತಗಳ ಅಂತರದಿಂದ ಆಯ್ಕೆಯಾಗಿದ್ದೇನೆ ಎಂದು ಸಿಎಂ ಹೇಳಿದರು ಎಂದು ಪಾಟೀಲ್ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!