ಉದಯವಾಹಿನಿ, ಬೆಂಗಳೂರು: ಕೇಂದ್ರ ಗೃಹ ಇಲಾಖೆಯ ಸೂಚನೆ ಮೇರೆಗೆ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಅಣಕು ಪ್ರದರ್ಶನ ನಡೆಯಲಿದೆ. ಬೆಂಗಳೂರು, ರಾಯಚೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಮಾಡಲು ನಿರ್ಧಾರ ಮಾಡಲಾಗಿದೆ.ಈ ಬಗ್ಗೆ ಈಗ ಕೇಂದ್ರ ಅಗ್ನಿಶಾಮಕ ದಳ, ಸಿವಿಲ್ ಡಿಫ್ಸೃ್ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದೆ. ಬೆಂಗಳೂರಿನಲ್ಲಿ ರಕ್ಷಣಾ ಇಲಾಖೆ ಸಂಬಂಧಿಸಿದಂತೆ ಹೆಚ್ಚು ಬೇಸ್ ಗಳು ಹಾಗೂ ಕಚೇರಿಗಳಿದ್ದು, ಸಂಜೆ 4 ಗಂಟೆ ಮಾಡಲು ನಿರ್ಧಾರ ಮಾಡಲಾಗಿದೆ. ಕೆಎಎ, ಕೆಎಸ್ಎಸ್ ಸಿವಿಲ್ ಡಿಫ್ಸೃ್, ವೈದ್ಯರುಗಳು, ಭಾಗಿಯಾಗಲಿದ್ದಾರೆ. ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ದಳ ಪೊಲೀಸ್ ಠಾಣೆಗಳ ಮೇಲೆ ಸೈರನ್ ಇರಲಿದೆ. 35 ಕಡೆ ಇದ್ದು, 32 ಕೆಲಸ ಮಾಡುತ್ತಿದೆ.
ಕಳೆದ ತಡರಾತ್ರಿಯೇ ಸಿವಿಲ್ ಡಿಫ್ಸೆ್ ಕಚೇರಿಗೆ ಮೇಲ್ ರವಾನೆ ಆಗಿದ್ದು, ಶತ್ರುಗಳ ದಾಳಿಯಿಂದ ಜನರನ್ನ ಹೇಗೆ ರಕ್ಷಿಸಬೇಕು ಎಂಬುದರ ಬಗ್ಗೆ ಆಯಾ ರಾಜ್ಯಗಳ ಸಿವಿಲ್ ಡಿಫ್ಸೆ್ ಮುಖ್ಯಸ್ಥರಿಗೆ ಮಾಹಿತಿ, ಸಲಹೆಗಳನ್ನ ಮೇಲಾಧಿಕಾರಿಗಳು ನೀಡಿದ್ದಾರೆ.ಜನರು ಏನ್ ಮಾಡಬೇಕು. ಮಾಡಬಾರದು ಎಂಬುದರ ಬಗ್ಗೆ ಕೇಂದ್ರದಿಂದ ಸುತ್ತೋಲೆ ಬರುತ್ತದೆ. ಒಂದು ವಾರದ ಕಾಲ ಅಣುಕು ಪ್ರದರ್ಶನ ನಡೆಯಲಿದೆ.
ಜನರು ಅನಗತ್ಯವಾಗಿ ಆತಂಕಕ್ಕೆ ಒಳಪಡಬೇಕಾದ ಅಗತ್ಯವಿಲ್ಲ ಎಂದು ಅದಿಕಾರಿಗಳು ಮಾಹಿತಿ ನೀಡಿದ್ದಾರೆ. ಏಕೆಂದರೆ ಇದು ಕೇವಲ ತರಬೇತಿ ವ್ಯಾಯಾಮವಾಗಿದೆ. ನಿಜವಾದ ತುರ್ತು ಸಂದರ್ಭದಲ್ಲಿ , ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳಿ, ಉದಾಹರಣೆಗೆ, ಮನೆಯ ಒಳಗೆ, ಕಟ್ಟಡದ ಒಳಗೆ, ಅಥವಾ ಸರ್ಕಾರವು ಗೊತ್ತುಪಡಿಸಿದ ಬಂಕರ್ಗೆ ತೆರೆದ ಪ್ರದೇಶಗಳಿಂದ ದೂರವಿರಬೇಕು. ಟಿವಿ, ರೇಡಿಯೋ, ಅಥವಾ ಸರ್ಕಾರದ ಅಧಿಕೃತ ಎಚ್ಚರಿಕೆ ಸಂದೇಶಗಳಿಗೆ ಗಮನ ಹರಿಸಬೇಕು. ವದಂತಿಗಳನ್ನು ನಂಬದಿರಿ ಮತ್ತು ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ. ವಾಯುದಾಳಿ ಎಚ್ಚರಿಕೆ ವ್ಯವಸ್ಥೆಯ ಪರಿಣಾಮಕಾರಿತ್ವವನ್ನು ಮೌಲ್ಯಮಾಪನ ಮಾಡುವುದು. ಭಾರತೀಯ ವಾಯುಸೇನೆಯೊಂದಿಗಿನ ಹಾಟ್ಲೈನ್/ರೇಡಿಯೊ ಸಂಪರ್ಕ ಲಿಂಕ್ಗಳ ಕಾರ್ಯಾಚರಣೆ.ನಿಯಂತ್ರಣ ಕೊಠಡಿಗಳು ಮತ್ತು ಶ್ಯಾಡೋ ನಿಯಂತ್ರಣ ಕೊಠಡಿಗಳ ಕಾರ್ಯನಿರ್ವಹಣೆಯನ್ನು ಪರೀಕ್ಷಿಸುವುದು.
